ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರೈತರಿಗೆ ಸಲಹೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿಂದು ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ ಜೇನು ಚಾಕಲೇಟ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೇನಿನಿಂದಲೇ ಚಾಕಲೇಟ್ ಸಿದ್ಧಗೊಂಡು ಮಾರುಕಟ್ಟೆಗೆ ಬಿಡುಗಡೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ಹೊಸ ಹೊಸ ಪ್ರಯೋಗಗಳು ನಡೆಯುತ್ತಿರಬೇಕು ಎಂದರು. ಔಷಧೀಯ ಗುಣವುಳ್ಳ ಜೇನು ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಈ ಕಾರ್ಯಕ್ರಮದಲ್ಲಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೊದಲಾದವರಿದ್ದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…