Advertisement
ಕೃಷಿ

ಜೇನು ಸಾಕಣೆ ಹಾಗೂ ರಫ್ತು ಹೆಚ್ಚಿಸಲು “ಸಿಹಿ ಕ್ರಾಂತಿ” ಯೋಜನೆ

Share

ಜೇನುಸಾಕಣೆ ಹಾಗೂ ಸಂಬಂಧಿತ ಇತರ ಚಟುವಟಿಕೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ  ಸಿಹಿ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜೇನುತುಪ್ಪದ ರಪ್ತು ಸಾಮರ್ಥ್ಯವನ್ನು ಹೆಚ್ಚಿಸಲು, ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳನ್ನು ಹೆಚ್ಚು ಮಾಡಲು  ರಫ್ತು ಅಭಿವೃದ್ಧಿ ಪ್ರಾಧಿಕಾರವು ಒತ್ತುನೀಡುತ್ತಿದೆ.

ಭಾರತವು 2020-21 ರಲ್ಲಿ 59,999 ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ಉತ್ಪಾದಿಸಿದೆ. ಯುನೈಟೆಡ್ ಸ್ಟೇಟ್ಸ್ 44,881 ಮೆಟ್ರಿಕ್‌ ಟನ್ ಪ್ರಮುಖ ಪಾಲನ್ನು ತೆಗೆದುಕೊಂಡಿದೆ. ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಾಂಗ್ಲಾದೇಶ ಮತ್ತು ಕೆನಡಾ ಭಾರತೀಯ ಜೇನುತುಪ್ಪದ ಇತರ ಪ್ರಮುಖ ತಾಣಗಳಾಗಿವೆ. ಭಾರತವು ತನ್ನ ಮೊದಲ ಸಂಘಟಿತ ರಪ್ತುಗಳನ್ನು 1996-97 ರಲ್ಲಿ ಪ್ರಾರಂಭಿಸಿತು. ಮಾತ್ರವಲ್ಲದೇ 2020ರಲ್ಲಿ ವಿಶ್ವ ಜೇನು ರಪ್ತು 736,266.02 ಮೆಟ್ರಿಕ್ ಟನ್ ಆಗಿದೆ. ಜೇನು ಉತ್ಪಾದನೆ ಮತ್ತು ರಪ್ತು ಮಾಡುವ ದೇಶಗಳಲ್ಲಿ ಭಾರತವು ವಿಶ್ವದಲ್ಲಿ 8ನೇ ಹಾಗೂ 9ನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತ ಸರ್ಕಾರವು ಮೂರು ವರ್ಷಗಳವರೆಗೆ ಅಂದರೆ 2020-21 ರಿಂದ 2022-23 ರವರೆಗೆ ರಾಷ್ಟ್ರೀಯ ಜೇನುಸಾಕಣೆ ಮತ್ತು ಹನಿಮಿಷನ್‌ಗಾಗಿ 500 ಕೋಟಿ ರೂ. , ಫೆಬ್ರವರಿ 2021 ರಲ್ಲಿ ಆತ್ಮನಿರ್ಭರ  ಭಾಗವಾಗಿ ಮಿಷನ್ ಘೋಷಿಸಲಾಯಿತು. ರಾಷ್ಟ್ರೀಯ ಜೇನುನೂಣ ಮಂಡಳಿ ಮೂಲಕ ಅನುಷ್ಠಾನಗೊಳಿಸುತ್ತಿರುವ ಸಿಹಿ ಕ್ರಾಂತಿಯ ಗುರಿಯನ್ನು ಸಾಧಿಸಲು ದೇಶದಲ್ಲಿ ವೈಜ್ಞಾನಿಕ ಜೇನುಸಾಕಣೆಯ ಒಟ್ಟಾರೆ ಪ್ರಚಾರ ಮತ್ತು ಅಭಿವೃದ್ಧಿಗೆ ಗುರಿಯಾಗಿದೆ. ಇದರ ಮುಖ್ಯ ಉದ್ದೇಶವೆಂದರೆ ದೇಶದಲ್ಲಿ ಜೇನುಸಾಕಣೆಯನ್ನು ಅಭಿವೃದ್ಧಿಪಡಿಸುವುದು, ಜೇನು ಸಮೂಹಗಳನ್ನು ಅಭಿವೃದ್ಧಿಪಡಿಸುವುದು, ಜೇನುತುಪ್ಪದ ಗುಣಮಟ್ಟ ಮತ್ತು ಉತ್ಪಾದಕತೆಯನ್ನು ಸುಧಾರಿಸುವುದು ಮತ್ತು ರಪ್ತುಗಳನ್ನು ಹೆಚ್ಚಿಸುವುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago