Advertisement
ಕೃಷಿ

ಜೇನು ಸಾಕಣೆ ಹಾಗೂ ರಫ್ತು ಹೆಚ್ಚಿಸಲು “ಸಿಹಿ ಕ್ರಾಂತಿ” ಯೋಜನೆ

Share

ಜೇನುಸಾಕಣೆ ಹಾಗೂ ಸಂಬಂಧಿತ ಇತರ ಚಟುವಟಿಕೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ  ಸಿಹಿ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜೇನುತುಪ್ಪದ ರಪ್ತು ಸಾಮರ್ಥ್ಯವನ್ನು ಹೆಚ್ಚಿಸಲು, ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳನ್ನು ಹೆಚ್ಚು ಮಾಡಲು  ರಫ್ತು ಅಭಿವೃದ್ಧಿ ಪ್ರಾಧಿಕಾರವು ಒತ್ತುನೀಡುತ್ತಿದೆ.

ಭಾರತವು 2020-21 ರಲ್ಲಿ 59,999 ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ಉತ್ಪಾದಿಸಿದೆ. ಯುನೈಟೆಡ್ ಸ್ಟೇಟ್ಸ್ 44,881 ಮೆಟ್ರಿಕ್‌ ಟನ್ ಪ್ರಮುಖ ಪಾಲನ್ನು ತೆಗೆದುಕೊಂಡಿದೆ. ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಾಂಗ್ಲಾದೇಶ ಮತ್ತು ಕೆನಡಾ ಭಾರತೀಯ ಜೇನುತುಪ್ಪದ ಇತರ ಪ್ರಮುಖ ತಾಣಗಳಾಗಿವೆ. ಭಾರತವು ತನ್ನ ಮೊದಲ ಸಂಘಟಿತ ರಪ್ತುಗಳನ್ನು 1996-97 ರಲ್ಲಿ ಪ್ರಾರಂಭಿಸಿತು. ಮಾತ್ರವಲ್ಲದೇ 2020ರಲ್ಲಿ ವಿಶ್ವ ಜೇನು ರಪ್ತು 736,266.02 ಮೆಟ್ರಿಕ್ ಟನ್ ಆಗಿದೆ. ಜೇನು ಉತ್ಪಾದನೆ ಮತ್ತು ರಪ್ತು ಮಾಡುವ ದೇಶಗಳಲ್ಲಿ ಭಾರತವು ವಿಶ್ವದಲ್ಲಿ 8ನೇ ಹಾಗೂ 9ನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತ ಸರ್ಕಾರವು ಮೂರು ವರ್ಷಗಳವರೆಗೆ ಅಂದರೆ 2020-21 ರಿಂದ 2022-23 ರವರೆಗೆ ರಾಷ್ಟ್ರೀಯ ಜೇನುಸಾಕಣೆ ಮತ್ತು ಹನಿಮಿಷನ್‌ಗಾಗಿ 500 ಕೋಟಿ ರೂ. , ಫೆಬ್ರವರಿ 2021 ರಲ್ಲಿ ಆತ್ಮನಿರ್ಭರ  ಭಾಗವಾಗಿ ಮಿಷನ್ ಘೋಷಿಸಲಾಯಿತು. ರಾಷ್ಟ್ರೀಯ ಜೇನುನೂಣ ಮಂಡಳಿ ಮೂಲಕ ಅನುಷ್ಠಾನಗೊಳಿಸುತ್ತಿರುವ ಸಿಹಿ ಕ್ರಾಂತಿಯ ಗುರಿಯನ್ನು ಸಾಧಿಸಲು ದೇಶದಲ್ಲಿ ವೈಜ್ಞಾನಿಕ ಜೇನುಸಾಕಣೆಯ ಒಟ್ಟಾರೆ ಪ್ರಚಾರ ಮತ್ತು ಅಭಿವೃದ್ಧಿಗೆ ಗುರಿಯಾಗಿದೆ. ಇದರ ಮುಖ್ಯ ಉದ್ದೇಶವೆಂದರೆ ದೇಶದಲ್ಲಿ ಜೇನುಸಾಕಣೆಯನ್ನು ಅಭಿವೃದ್ಧಿಪಡಿಸುವುದು, ಜೇನು ಸಮೂಹಗಳನ್ನು ಅಭಿವೃದ್ಧಿಪಡಿಸುವುದು, ಜೇನುತುಪ್ಪದ ಗುಣಮಟ್ಟ ಮತ್ತು ಉತ್ಪಾದಕತೆಯನ್ನು ಸುಧಾರಿಸುವುದು ಮತ್ತು ರಪ್ತುಗಳನ್ನು ಹೆಚ್ಚಿಸುವುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

58 minutes ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago