Advertisement
ಕೃಷಿ

ಜೇನು ಸಾಕಣೆ ಹಾಗೂ ರಫ್ತು ಹೆಚ್ಚಿಸಲು “ಸಿಹಿ ಕ್ರಾಂತಿ” ಯೋಜನೆ

Share

ಜೇನುಸಾಕಣೆ ಹಾಗೂ ಸಂಬಂಧಿತ ಇತರ ಚಟುವಟಿಕೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ  ಸಿಹಿ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜೇನುತುಪ್ಪದ ರಪ್ತು ಸಾಮರ್ಥ್ಯವನ್ನು ಹೆಚ್ಚಿಸಲು, ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳನ್ನು ಹೆಚ್ಚು ಮಾಡಲು  ರಫ್ತು ಅಭಿವೃದ್ಧಿ ಪ್ರಾಧಿಕಾರವು ಒತ್ತುನೀಡುತ್ತಿದೆ.

ಭಾರತವು 2020-21 ರಲ್ಲಿ 59,999 ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ಉತ್ಪಾದಿಸಿದೆ. ಯುನೈಟೆಡ್ ಸ್ಟೇಟ್ಸ್ 44,881 ಮೆಟ್ರಿಕ್‌ ಟನ್ ಪ್ರಮುಖ ಪಾಲನ್ನು ತೆಗೆದುಕೊಂಡಿದೆ. ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಾಂಗ್ಲಾದೇಶ ಮತ್ತು ಕೆನಡಾ ಭಾರತೀಯ ಜೇನುತುಪ್ಪದ ಇತರ ಪ್ರಮುಖ ತಾಣಗಳಾಗಿವೆ. ಭಾರತವು ತನ್ನ ಮೊದಲ ಸಂಘಟಿತ ರಪ್ತುಗಳನ್ನು 1996-97 ರಲ್ಲಿ ಪ್ರಾರಂಭಿಸಿತು. ಮಾತ್ರವಲ್ಲದೇ 2020ರಲ್ಲಿ ವಿಶ್ವ ಜೇನು ರಪ್ತು 736,266.02 ಮೆಟ್ರಿಕ್ ಟನ್ ಆಗಿದೆ. ಜೇನು ಉತ್ಪಾದನೆ ಮತ್ತು ರಪ್ತು ಮಾಡುವ ದೇಶಗಳಲ್ಲಿ ಭಾರತವು ವಿಶ್ವದಲ್ಲಿ 8ನೇ ಹಾಗೂ 9ನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತ ಸರ್ಕಾರವು ಮೂರು ವರ್ಷಗಳವರೆಗೆ ಅಂದರೆ 2020-21 ರಿಂದ 2022-23 ರವರೆಗೆ ರಾಷ್ಟ್ರೀಯ ಜೇನುಸಾಕಣೆ ಮತ್ತು ಹನಿಮಿಷನ್‌ಗಾಗಿ 500 ಕೋಟಿ ರೂ. , ಫೆಬ್ರವರಿ 2021 ರಲ್ಲಿ ಆತ್ಮನಿರ್ಭರ  ಭಾಗವಾಗಿ ಮಿಷನ್ ಘೋಷಿಸಲಾಯಿತು. ರಾಷ್ಟ್ರೀಯ ಜೇನುನೂಣ ಮಂಡಳಿ ಮೂಲಕ ಅನುಷ್ಠಾನಗೊಳಿಸುತ್ತಿರುವ ಸಿಹಿ ಕ್ರಾಂತಿಯ ಗುರಿಯನ್ನು ಸಾಧಿಸಲು ದೇಶದಲ್ಲಿ ವೈಜ್ಞಾನಿಕ ಜೇನುಸಾಕಣೆಯ ಒಟ್ಟಾರೆ ಪ್ರಚಾರ ಮತ್ತು ಅಭಿವೃದ್ಧಿಗೆ ಗುರಿಯಾಗಿದೆ. ಇದರ ಮುಖ್ಯ ಉದ್ದೇಶವೆಂದರೆ ದೇಶದಲ್ಲಿ ಜೇನುಸಾಕಣೆಯನ್ನು ಅಭಿವೃದ್ಧಿಪಡಿಸುವುದು, ಜೇನು ಸಮೂಹಗಳನ್ನು ಅಭಿವೃದ್ಧಿಪಡಿಸುವುದು, ಜೇನುತುಪ್ಪದ ಗುಣಮಟ್ಟ ಮತ್ತು ಉತ್ಪಾದಕತೆಯನ್ನು ಸುಧಾರಿಸುವುದು ಮತ್ತು ರಪ್ತುಗಳನ್ನು ಹೆಚ್ಚಿಸುವುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

16 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

22 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

22 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

22 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

22 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

22 hours ago