Advertisement
MIRROR FOCUS

ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |

Share

ಕೇಂದ್ರ ಪುರಸ್ಕೃತ ಪ್ರಮುಖ ಯೋಜನೆಗಳಲ್ಲಿ ಒಂದಾದ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಬರ ಪೀಡಿತ ಜಿಲ್ಲೆ ಕೋಲಾರದ ರೈತರಿಗೆ ವರದಾನವಾಗಿ ಪರಿಣಮಿಸಿದೆ. ಯೋಜನೆಯಿಂದ ಜಿಲ್ಲೆಯಲ್ಲಿ , ಉತ್ತಮ ಗುಣಮಟ್ಟದ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗಿದ್ದು, ಹಣ್ಣುಗಳ ಇಳುವರಿಯೂ ಹೆಚ್ಚಾಗಿದೆ.ಸುಮಾರು 37 ಹೆಕ್ಟೇರ್ ಪ್ರದೇಶದಲ್ಲಿ ಪಾಲಿ ಹೌಸ್ ಮೂಲಕ ರೈತರು ಬೆಳೆ ಬೆಳೆಯಲು ಅನುಕೂಲವಾಗಿದೆ.

ಸರ್ಕಾರ ವಿವಿಧ ಯೋಜನೆಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಅಭಿವೃದ್ಧಿಗಾಗಿ ಹಮ್ಮಿಕೊಳ್ಳುತ್ತದೆ. ಆದರೆ ಯೋಜನೆಗಳು ಅಗತ್ಯ ಇರುವ ಕಡೆ ಹಲವು ಸಂದರ್ಭ ತಲಪುವುದಿಲ್ಲ. ಉದ್ದೇಶವೂ ಈಡೇರಿಕೆಯಾಗುವುದಿಲ್ಲ. ಇದಕ್ಕೆ ಅಧಿಕಾರಿಗಳು, ಇಲಾಖೆಗಳು ಮಾತ್ರಾ ಕಾರಣವಲ್ಲ ರೈತರು , ಗ್ರಾಮೀಣ ಭಾಗದ ಜನರೂ ಕಾರಣವಾಗುತ್ತಾರೆ. ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಅನುಷ್ಟಾನ ಮಾಡಬೇಕಾಗಿದೆ. ಅಂತಹ ಯೋಜನೆಗಳಲ್ಲಿ ಕೋಲಾರದಲ್ಲಿ ಈ ಬಾರಿ ಪಾಲಿ ಹೌಸ್‌ ಉತ್ತಮವಾದ ಪರಿಣಾಮ ಬೀರಿದೆ. ಹಲವು ಕಡೆ ಅನುಷ್ಟಾನವಾಗಿದೆ, ಉತ್ತಮ ಬೆಳೆಯೂ ಸಾಧ್ಯವಾಗಿದೆ.

ಕೋಲಾರ ತೋಟಗಾರಿಕಾ ಉಪ ನಿರ್ದೇಶಕ ಕುಮಾರಸ್ವಾಮಿ ಅವರ ಮಾಹಿತಿ ಪ್ರಕಾರ, ಬರಪೀಡಿತ ಜಿಲ್ಲೆ ಕೋಲಾರದ, ಸುಮಾರು 37 ಹೆಕ್ಟೇರ್ ಪ್ರದೇಶದಲ್ಲಿ ಪಾಲಿ ಹೌಸ್ ಗಳಿದ್ದು, ಕಾರ್ನೇಶಿಯಾ, ಕ್ಯಾಪ್ಸಿಕಂ, ಸೇವಂತಿಗೆ ಸೇರಿ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತಿದೆ, ಗುಣಮಟ್ಟ ಮತ್ತು ಇಳುವರಿಯಲ್ಲಿ ಹೆಚ್ಚಳವಾಗಿ ರೈತರ ಲಾಭಗಳಿಕೆ ಪ್ರಮಾಣ ವೃದ್ಧಿಯಾಗಿದೆ ಎನ್ನುತ್ತಾರೆ.

ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ನಾಗರಾಜ್ ಅವರ ಪ್ರಕಾರ, ತೋಟಗಾರಿಕಾ ಮಿಷನ್ ಅಡಿಯಲ್ಲಿ ನೆರವು ಪಡೆದು,  ಕೆಲವು ರೈತರು ನರ್ಸರಿಗಳನ್ನು ಆರಂಭಿಸಿ, ಉತ್ತಮ ಫಸಲು ನೀಡುವ ಸಸಿಗಳನ್ನು ಬೆಳೆಯುತ್ತಿದ್ದಾರೆ ಎನ್ನುತ್ತಾರೆ.

ಕೇಂದ್ರ ಸರ್ಕಾರದ ನೆರವಿನಿಂದ, ಪಾಲಿ ಹೌಸ್, ಪ್ಯಾಕ್ ಹೌಸ್ ಗಳ ಸೌಲಭ್ಯದಿಂದಾಗಿ ಹೆಚ್ಚಿನ ಲಾಭ ಗಳಿಕೆಗೆ ಸಹಕಾರಿಯಾಗುತ್ತಿದೆ . ಆದರೆ ಕೋಲಾರ ಜಿಲ್ಲೆಗೆ ಕೇಂದ್ರ ಪುರಸ್ಕೃತ ಯೋಜನೆಗಳಿಂದ ಸಿಗುತ್ತಿರುವ ಅನುದಾನ ಕಡಿಮೆಯಾಗಿದ್ದು, ಅದರ ಪ್ರಮಾಣ ಹೆಚ್ಚಳ ಮಾಡಬೇಕು ಎಂದು ರೈತರು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

8 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

17 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

21 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago