ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು | ಅಂಗಾಂಗ ದಾನ ಮಾಡಿ ಮಗಳ ಬದುಕಿನ ಸಾರ್ಥಕತೆ ಮೆರೆದ ಪೋಷಕರು |

February 12, 2022
10:28 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳೊಬ್ಬಳು ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಅಂಗಾಂಗ ದಾನದ ಮೂಲಕ ಮದುಮಗಳ ಪೋಷಕರು ಮಗಳ ಬದುಕಿನ ಸಾರ್ಥಕತೆಯನ್ನು ಮೆರೆದಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ  ಮದುಮಗಳು ಚೈತ್ರಾ ಮದುವೆಯ ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಈ ವೇಳೆ ಆಕೆಯನ್ನು ಕೂಡಲೇ ಬೆಂಗಳೂರಿನ ನಿಮ್ದಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ  ಅಂಗಾಂಗ ದಾನ ಮಾಡಲು ಮನವೊಲಿಸಿದರು. ವೈದ್ಯರ ಮಾತಿಗೆ ಒಪ್ಪಿದಂತ ಪೋಷಕರು, ಚೈತ್ರಳ ಅಂಗಾಂಗವನ್ನು ದಾನ ಮಾಡಿದ್ದಾರೆ.

ಹೀಗಾಗಿ ಹಲವು ರೋಗಗಳಿಂದ ಬಳಲುತ್ತಿದ್ದ ಅನೇಕರ ಬಾಳಿಗೆ ಚೈತ್ರ ಬೆಳಕಾಗುವಂತಾಗಿದೆ. ಈ ಮಾಹಿತಿಯನ್ನು ಟ್ವೀಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror