ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳೊಬ್ಬಳು ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಅಂಗಾಂಗ ದಾನದ ಮೂಲಕ ಮದುಮಗಳ ಪೋಷಕರು ಮಗಳ ಬದುಕಿನ ಸಾರ್ಥಕತೆಯನ್ನು ಮೆರೆದಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳು ಚೈತ್ರಾ ಮದುವೆಯ ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಈ ವೇಳೆ ಆಕೆಯನ್ನು ಕೂಡಲೇ ಬೆಂಗಳೂರಿನ ನಿಮ್ದಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನ ಮಾಡಲು ಮನವೊಲಿಸಿದರು. ವೈದ್ಯರ ಮಾತಿಗೆ ಒಪ್ಪಿದಂತ ಪೋಷಕರು, ಚೈತ್ರಳ ಅಂಗಾಂಗವನ್ನು ದಾನ ಮಾಡಿದ್ದಾರೆ.
ಹೀಗಾಗಿ ಹಲವು ರೋಗಗಳಿಂದ ಬಳಲುತ್ತಿದ್ದ ಅನೇಕರ ಬಾಳಿಗೆ ಚೈತ್ರ ಬೆಳಕಾಗುವಂತಾಗಿದೆ. ಈ ಮಾಹಿತಿಯನ್ನು ಟ್ವೀಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…