ಬಿರು ಬಿಸಿಲ ಜೊತೆಗೆ ಕಾಲರಾ ರೋಗದ ಭೀತಿ | ಮಕ್ಕಳ ಆರೋಗ್ಯದ ಕಡೆ ಇರಲಿ ಗಮನ

April 7, 2024
10:14 AM

ರಾಜ್ಯಾದ್ಯಂತ  ಜಲಕ್ಷಾಮ(Water Crisis) ಶುರುವಾಗಿದೆ. ಸರ್ಕಾರ(Govt) ಕೂಡ ನೀರು ಸರಬರಾಜು(Water supply) ಮಾಡೋದಕ್ಕೆ ನಾನಾ ಪ್ರಯತ್ನ ಮಾಡ್ತಿದೆ. ಮತ್ತೊಂದೆಡೆ ಸುಡುಸುಡು ಬಿಸಿಲಿನ ವಾತಾವರಣ. ನೀರಿಲ್ಲದೇ ಜನಬೇಸಿಗೆಯಲ್ಲಿ(Summer) ಜನ ಪರದಾಟ ಮಾಡ್ತಿದ್ರೇ ಈಗ ಆರೋಗ್ಯದ(Health) ಸಮಸ್ಯೆ ಕೂಡ ಶುರುವಾಗಿದ್ದು, ಕಾಲರಾ(cholera Disease) ಭೀತಿ ಎದುರಾಗಿದೆ.

ಬಿರು ಬಿಸಿಲಿನ ವಾತಾವರಣ, ವಾಡಿಕೆಗಿಂತ ತಾಪಮಾನ ಹೆಚ್ಚಾಗಿ ಜನ ತತ್ತರಿಸ್ತಿದ್ದಾರೆ. ನೀರೇ ಇಲ್ಲದೇ ಕೆರೆ, ಬಾವಿ, ನದಿಗಳು ಬತ್ತಿವೆ. ನೀರಿನಿಂದಲೇ ಕಾಲರಾ ಬರ್ತಿದ್ದು, ಈಗಾಗಲೇ 6 ಕ್ಕೂ ಹೆಚ್ಚು ಕೇಸ್ ಸಿಲಿಕಾನ್ ಸಿಟಿಯಲ್ಲಿ ದಾಖಲಾಗಿದೆ. ಹಾಗಾದ್ರೆ ಕಾಲರಾದಿಂದ ದೂರ ಇರೋದು ಹೇಗೆ, ನಾವು ನಮ್ಮ ಮಕ್ಕಳು ಹಿರಿಯರನ್ನ ರಕ್ಷಿಸಿಕೊಳ್ಳೋದು ಹೇಗೆ..? ಅಲ್ಲದೇ ಬೇಸಿಗೆಯಲ್ಲಿ ಹೇಗೆ ಆಹಾರ ಇರಬೇಕು, ಅದರಲ್ಲೂ ಮಕ್ಕಳ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

* ಮಕ್ಕಳಿಗೆ ನಿತ್ಯ 2 ರಿಂದ 3 ಲೀಟರ್ ನೀರು ಕುಡಿಸಿ
* ಕುಡಿಯುವ ನೀರನ್ನ ಕಾಯಿಸಿ, ಆರಿಸಿದ ನಂತರ ನೀಡಿ
* ಪ್ಲಾಸ್ಟಿಕ್ ಬಾಟಲ್ ಬಳಸೋದನ್ನ ನಿಲ್ಲಿಸಿ
* ಸ್ಟೀಲ್ ಬಾಟಲ್‍ಗಳಲ್ಲಿ ನೀರನ್ನು ಕೊಡಿ
* ಕೋಲ್ಡ್ ವಾಟರ್ ನೀಡಲೇಬೇಡಿ
* ಮಿತವಾದ ಮೃದುವಾದ ಆಹಾರ ನೀಡಿ

ಮಕ್ಕಳು ಮಾತ್ರವಲ್ಲ ಪೋಷಕರು ಮತ್ತು ಹಿರಿಯರು ಸಹ ತಿನ್ನೋ ಆಹಾರದ ಬಗ್ಗೆ ಗಮನವಹಿಸಬೇಕು. ಜೊತೆಗೆ ಮನೆಯಿಂದ ಹೊರಗೆ ಬಂದಾಗ ಕಾಟನ್ ಬಟ್ಟೆಯನ್ನ ಧರಿಸಿ, ಸೆಖೆ ಅಂತಾ ಎಸಿಯಲ್ಲೇ ಇದ್ರೂ ಸಮಸ್ಯೆಯಾಗಲಿದೆ ಎಂದು ಆಹಾರ ತಜ್ಞೆ ಡಾ. ಪ್ರೇಮ ಹೇಳುತ್ತಾರೆ. ಒಟ್ಟಿನಲ್ಲಿ ಈ ಬೇಸಿಗೆ ನೀರಿಲ್ಲದೇ ನಾನಾ ಸಮಸ್ಯೆ ಉಂಟು ಮಾಡ್ತಿದೆ. ನೀರಿಗಾಗಿ ಜನ ಬೀದಿ ಬೀದಿ ಸುತ್ತೋ ಪರಿಸ್ಥಿತಿ ನಿರ್ಮಾಣವಾಗಿದ್ರೇ, ನೀರಿನಿಂದಲೇ ಕಾಲರಾ ಕೂಡ ಜನರ ನಿದ್ದೆಗೆಡಿಸ್ತಿರೋದಂತೂ ಸತ್ಯ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror