Advertisement
MIRROR FOCUS

ಬಿರು ಬಿಸಿಲ ಜೊತೆಗೆ ಕಾಲರಾ ರೋಗದ ಭೀತಿ | ಮಕ್ಕಳ ಆರೋಗ್ಯದ ಕಡೆ ಇರಲಿ ಗಮನ

Share

ರಾಜ್ಯಾದ್ಯಂತ  ಜಲಕ್ಷಾಮ(Water Crisis) ಶುರುವಾಗಿದೆ. ಸರ್ಕಾರ(Govt) ಕೂಡ ನೀರು ಸರಬರಾಜು(Water supply) ಮಾಡೋದಕ್ಕೆ ನಾನಾ ಪ್ರಯತ್ನ ಮಾಡ್ತಿದೆ. ಮತ್ತೊಂದೆಡೆ ಸುಡುಸುಡು ಬಿಸಿಲಿನ ವಾತಾವರಣ. ನೀರಿಲ್ಲದೇ ಜನಬೇಸಿಗೆಯಲ್ಲಿ(Summer) ಜನ ಪರದಾಟ ಮಾಡ್ತಿದ್ರೇ ಈಗ ಆರೋಗ್ಯದ(Health) ಸಮಸ್ಯೆ ಕೂಡ ಶುರುವಾಗಿದ್ದು, ಕಾಲರಾ(cholera Disease) ಭೀತಿ ಎದುರಾಗಿದೆ.

ಬಿರು ಬಿಸಿಲಿನ ವಾತಾವರಣ, ವಾಡಿಕೆಗಿಂತ ತಾಪಮಾನ ಹೆಚ್ಚಾಗಿ ಜನ ತತ್ತರಿಸ್ತಿದ್ದಾರೆ. ನೀರೇ ಇಲ್ಲದೇ ಕೆರೆ, ಬಾವಿ, ನದಿಗಳು ಬತ್ತಿವೆ. ನೀರಿನಿಂದಲೇ ಕಾಲರಾ ಬರ್ತಿದ್ದು, ಈಗಾಗಲೇ 6 ಕ್ಕೂ ಹೆಚ್ಚು ಕೇಸ್ ಸಿಲಿಕಾನ್ ಸಿಟಿಯಲ್ಲಿ ದಾಖಲಾಗಿದೆ. ಹಾಗಾದ್ರೆ ಕಾಲರಾದಿಂದ ದೂರ ಇರೋದು ಹೇಗೆ, ನಾವು ನಮ್ಮ ಮಕ್ಕಳು ಹಿರಿಯರನ್ನ ರಕ್ಷಿಸಿಕೊಳ್ಳೋದು ಹೇಗೆ..? ಅಲ್ಲದೇ ಬೇಸಿಗೆಯಲ್ಲಿ ಹೇಗೆ ಆಹಾರ ಇರಬೇಕು, ಅದರಲ್ಲೂ ಮಕ್ಕಳ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

* ಮಕ್ಕಳಿಗೆ ನಿತ್ಯ 2 ರಿಂದ 3 ಲೀಟರ್ ನೀರು ಕುಡಿಸಿ
* ಕುಡಿಯುವ ನೀರನ್ನ ಕಾಯಿಸಿ, ಆರಿಸಿದ ನಂತರ ನೀಡಿ
* ಪ್ಲಾಸ್ಟಿಕ್ ಬಾಟಲ್ ಬಳಸೋದನ್ನ ನಿಲ್ಲಿಸಿ
* ಸ್ಟೀಲ್ ಬಾಟಲ್‍ಗಳಲ್ಲಿ ನೀರನ್ನು ಕೊಡಿ
* ಕೋಲ್ಡ್ ವಾಟರ್ ನೀಡಲೇಬೇಡಿ
* ಮಿತವಾದ ಮೃದುವಾದ ಆಹಾರ ನೀಡಿ

ಮಕ್ಕಳು ಮಾತ್ರವಲ್ಲ ಪೋಷಕರು ಮತ್ತು ಹಿರಿಯರು ಸಹ ತಿನ್ನೋ ಆಹಾರದ ಬಗ್ಗೆ ಗಮನವಹಿಸಬೇಕು. ಜೊತೆಗೆ ಮನೆಯಿಂದ ಹೊರಗೆ ಬಂದಾಗ ಕಾಟನ್ ಬಟ್ಟೆಯನ್ನ ಧರಿಸಿ, ಸೆಖೆ ಅಂತಾ ಎಸಿಯಲ್ಲೇ ಇದ್ರೂ ಸಮಸ್ಯೆಯಾಗಲಿದೆ ಎಂದು ಆಹಾರ ತಜ್ಞೆ ಡಾ. ಪ್ರೇಮ ಹೇಳುತ್ತಾರೆ. ಒಟ್ಟಿನಲ್ಲಿ ಈ ಬೇಸಿಗೆ ನೀರಿಲ್ಲದೇ ನಾನಾ ಸಮಸ್ಯೆ ಉಂಟು ಮಾಡ್ತಿದೆ. ನೀರಿಗಾಗಿ ಜನ ಬೀದಿ ಬೀದಿ ಸುತ್ತೋ ಪರಿಸ್ಥಿತಿ ನಿರ್ಮಾಣವಾಗಿದ್ರೇ, ನೀರಿನಿಂದಲೇ ಕಾಲರಾ ಕೂಡ ಜನರ ನಿದ್ದೆಗೆಡಿಸ್ತಿರೋದಂತೂ ಸತ್ಯ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

9 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

14 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

23 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

24 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago