Advertisement
MIRROR FOCUS

ಬಿರು ಬಿಸಿಲ ಜೊತೆಗೆ ಕಾಲರಾ ರೋಗದ ಭೀತಿ | ಮಕ್ಕಳ ಆರೋಗ್ಯದ ಕಡೆ ಇರಲಿ ಗಮನ

Share

ರಾಜ್ಯಾದ್ಯಂತ  ಜಲಕ್ಷಾಮ(Water Crisis) ಶುರುವಾಗಿದೆ. ಸರ್ಕಾರ(Govt) ಕೂಡ ನೀರು ಸರಬರಾಜು(Water supply) ಮಾಡೋದಕ್ಕೆ ನಾನಾ ಪ್ರಯತ್ನ ಮಾಡ್ತಿದೆ. ಮತ್ತೊಂದೆಡೆ ಸುಡುಸುಡು ಬಿಸಿಲಿನ ವಾತಾವರಣ. ನೀರಿಲ್ಲದೇ ಜನಬೇಸಿಗೆಯಲ್ಲಿ(Summer) ಜನ ಪರದಾಟ ಮಾಡ್ತಿದ್ರೇ ಈಗ ಆರೋಗ್ಯದ(Health) ಸಮಸ್ಯೆ ಕೂಡ ಶುರುವಾಗಿದ್ದು, ಕಾಲರಾ(cholera Disease) ಭೀತಿ ಎದುರಾಗಿದೆ.

ಬಿರು ಬಿಸಿಲಿನ ವಾತಾವರಣ, ವಾಡಿಕೆಗಿಂತ ತಾಪಮಾನ ಹೆಚ್ಚಾಗಿ ಜನ ತತ್ತರಿಸ್ತಿದ್ದಾರೆ. ನೀರೇ ಇಲ್ಲದೇ ಕೆರೆ, ಬಾವಿ, ನದಿಗಳು ಬತ್ತಿವೆ. ನೀರಿನಿಂದಲೇ ಕಾಲರಾ ಬರ್ತಿದ್ದು, ಈಗಾಗಲೇ 6 ಕ್ಕೂ ಹೆಚ್ಚು ಕೇಸ್ ಸಿಲಿಕಾನ್ ಸಿಟಿಯಲ್ಲಿ ದಾಖಲಾಗಿದೆ. ಹಾಗಾದ್ರೆ ಕಾಲರಾದಿಂದ ದೂರ ಇರೋದು ಹೇಗೆ, ನಾವು ನಮ್ಮ ಮಕ್ಕಳು ಹಿರಿಯರನ್ನ ರಕ್ಷಿಸಿಕೊಳ್ಳೋದು ಹೇಗೆ..? ಅಲ್ಲದೇ ಬೇಸಿಗೆಯಲ್ಲಿ ಹೇಗೆ ಆಹಾರ ಇರಬೇಕು, ಅದರಲ್ಲೂ ಮಕ್ಕಳ ಬಗ್ಗೆ ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

* ಮಕ್ಕಳಿಗೆ ನಿತ್ಯ 2 ರಿಂದ 3 ಲೀಟರ್ ನೀರು ಕುಡಿಸಿ
* ಕುಡಿಯುವ ನೀರನ್ನ ಕಾಯಿಸಿ, ಆರಿಸಿದ ನಂತರ ನೀಡಿ
* ಪ್ಲಾಸ್ಟಿಕ್ ಬಾಟಲ್ ಬಳಸೋದನ್ನ ನಿಲ್ಲಿಸಿ
* ಸ್ಟೀಲ್ ಬಾಟಲ್‍ಗಳಲ್ಲಿ ನೀರನ್ನು ಕೊಡಿ
* ಕೋಲ್ಡ್ ವಾಟರ್ ನೀಡಲೇಬೇಡಿ
* ಮಿತವಾದ ಮೃದುವಾದ ಆಹಾರ ನೀಡಿ

ಮಕ್ಕಳು ಮಾತ್ರವಲ್ಲ ಪೋಷಕರು ಮತ್ತು ಹಿರಿಯರು ಸಹ ತಿನ್ನೋ ಆಹಾರದ ಬಗ್ಗೆ ಗಮನವಹಿಸಬೇಕು. ಜೊತೆಗೆ ಮನೆಯಿಂದ ಹೊರಗೆ ಬಂದಾಗ ಕಾಟನ್ ಬಟ್ಟೆಯನ್ನ ಧರಿಸಿ, ಸೆಖೆ ಅಂತಾ ಎಸಿಯಲ್ಲೇ ಇದ್ರೂ ಸಮಸ್ಯೆಯಾಗಲಿದೆ ಎಂದು ಆಹಾರ ತಜ್ಞೆ ಡಾ. ಪ್ರೇಮ ಹೇಳುತ್ತಾರೆ. ಒಟ್ಟಿನಲ್ಲಿ ಈ ಬೇಸಿಗೆ ನೀರಿಲ್ಲದೇ ನಾನಾ ಸಮಸ್ಯೆ ಉಂಟು ಮಾಡ್ತಿದೆ. ನೀರಿಗಾಗಿ ಜನ ಬೀದಿ ಬೀದಿ ಸುತ್ತೋ ಪರಿಸ್ಥಿತಿ ನಿರ್ಮಾಣವಾಗಿದ್ರೇ, ನೀರಿನಿಂದಲೇ ಕಾಲರಾ ಕೂಡ ಜನರ ನಿದ್ದೆಗೆಡಿಸ್ತಿರೋದಂತೂ ಸತ್ಯ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

4 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

5 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago