ಅಡುಗೆ ಅನಿಲ, ಎಣ್ಣೆ ಹಾಗೂ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಅನಿವಾರ್ಯ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.
ಆಡುಗೆ ಎಣ್ಣೆ, ಕಾಫೀ ಪುಡಿ, ಗ್ಯಾಸ್ ಮುಂತಾದ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾದಂತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೋಟೆಲ್, ದರ್ಶಿನಿ, ರೆಸ್ಟೊರೆಂಟ್ಗಳಲ್ಲಿ ಶೇ.10ರಷ್ಟು ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ವಾರದಲ್ಲಿ ಹೋಟೆಲ್ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಕಡಿಮೆ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದ್ದೇವೆ. ಆಯಾ ಹೊಟೇಲ್ ಗಳಲ್ಲಿ ಯಾವ ತಿಂಡಿಗೆ ಎಷ್ಟು ಏರಿಕೆ ಎಂಬುದು ಆಯಾ ಹೋಟೆಲ್ಗಳ ಮಾಲೀಕರ ನಿರ್ಧಾರ ತೆಗೆದುಕೊಳ್ತಾರೆ ಅಂತ ಪಿ.ಸಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…