ಅಡುಗೆ ಅನಿಲ, ಎಣ್ಣೆ ಹಾಗೂ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಅನಿವಾರ್ಯ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.
ಆಡುಗೆ ಎಣ್ಣೆ, ಕಾಫೀ ಪುಡಿ, ಗ್ಯಾಸ್ ಮುಂತಾದ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾದಂತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೋಟೆಲ್, ದರ್ಶಿನಿ, ರೆಸ್ಟೊರೆಂಟ್ಗಳಲ್ಲಿ ಶೇ.10ರಷ್ಟು ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ವಾರದಲ್ಲಿ ಹೋಟೆಲ್ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಕಡಿಮೆ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದ್ದೇವೆ. ಆಯಾ ಹೊಟೇಲ್ ಗಳಲ್ಲಿ ಯಾವ ತಿಂಡಿಗೆ ಎಷ್ಟು ಏರಿಕೆ ಎಂಬುದು ಆಯಾ ಹೋಟೆಲ್ಗಳ ಮಾಲೀಕರ ನಿರ್ಧಾರ ತೆಗೆದುಕೊಳ್ತಾರೆ ಅಂತ ಪಿ.ಸಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…