ಅಡುಗೆ ಅನಿಲ, ಎಣ್ಣೆ ಹಾಗೂ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಅನಿವಾರ್ಯ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.
ಆಡುಗೆ ಎಣ್ಣೆ, ಕಾಫೀ ಪುಡಿ, ಗ್ಯಾಸ್ ಮುಂತಾದ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾದಂತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೋಟೆಲ್, ದರ್ಶಿನಿ, ರೆಸ್ಟೊರೆಂಟ್ಗಳಲ್ಲಿ ಶೇ.10ರಷ್ಟು ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ವಾರದಲ್ಲಿ ಹೋಟೆಲ್ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಕಡಿಮೆ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದ್ದೇವೆ. ಆಯಾ ಹೊಟೇಲ್ ಗಳಲ್ಲಿ ಯಾವ ತಿಂಡಿಗೆ ಎಷ್ಟು ಏರಿಕೆ ಎಂಬುದು ಆಯಾ ಹೋಟೆಲ್ಗಳ ಮಾಲೀಕರ ನಿರ್ಧಾರ ತೆಗೆದುಕೊಳ್ತಾರೆ ಅಂತ ಪಿ.ಸಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…