ಅಡುಗೆ ಅನಿಲ, ಎಣ್ಣೆ ಹಾಗೂ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಅನಿವಾರ್ಯ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.
ಆಡುಗೆ ಎಣ್ಣೆ, ಕಾಫೀ ಪುಡಿ, ಗ್ಯಾಸ್ ಮುಂತಾದ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾದಂತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೋಟೆಲ್, ದರ್ಶಿನಿ, ರೆಸ್ಟೊರೆಂಟ್ಗಳಲ್ಲಿ ಶೇ.10ರಷ್ಟು ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ವಾರದಲ್ಲಿ ಹೋಟೆಲ್ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಕಡಿಮೆ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದ್ದೇವೆ. ಆಯಾ ಹೊಟೇಲ್ ಗಳಲ್ಲಿ ಯಾವ ತಿಂಡಿಗೆ ಎಷ್ಟು ಏರಿಕೆ ಎಂಬುದು ಆಯಾ ಹೋಟೆಲ್ಗಳ ಮಾಲೀಕರ ನಿರ್ಧಾರ ತೆಗೆದುಕೊಳ್ತಾರೆ ಅಂತ ಪಿ.ಸಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…