Advertisement
The Rural Mirror ಕಾಳಜಿ

ಸುಳ್ಯದಲ್ಲೊಂದು ಗುಡಿಸಲು ಮನೆ | ಪುತ್ತಿಲ ಪರಿವಾರದ ಸುಳ್ಯ ಘಟಕದಿಂದ ಮನೆ ಕನಸಿಗೆ ನೆರವು | ಸಹೃದಯಿಗಳು ನೆರವು ನೀಡಿ |

Share

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಶಾಂತಿನಗರದಲ್ಲಿ ತೀರಾ ಚಿಕ್ಕದಾದ ಗುಡಿಸಲು ಮನೆಯಲ್ಲಿರುವ ಮಹಿಳೆಯೊಬ್ಬರ ಮನೆಯ ಕನಸಿಗೆ ಪುತ್ತಿಲ ಪರಿವಾರದ ಸುಳ್ಯ ಘಟಕವು ಈಗ ನೆರವಿಗೆ ಇಳಿದಿದೆ. ಇವರ ಜೊತೆ ಸಹೃದಯಿಗಳು ಕೈಜೋಡಿಸಬಹುದು.  ಈ ಮಹಿಳೆ ಸುಮತಿ ಅವರ ಪರಿಸ್ಥಿತಿ ತೀರಾ ಸಂಕಷ್ಟದಿಂದ ಕೂಡಿದೆ.

ಮಹಿಳೆಯ ಪತಿ ಗಣೇಶ ಅಸೌಖ್ಯದ ಕಾರಣದಿಂದಾಗಿ ಇಹಲೋಕ ತ್ಯಜಿಸಿ ಹಲವು ವರ್ಷಗಳಾಗಿವೆ. ಮೂವರು ಮಕ್ಕಳೊಂದಿಗೆ ಮಹಿಳೆಯ ವಾಸ. ಆದರೆ ಮೂರು ಮಕ್ಕಳಲ್ಲಿ ಒಬ್ಬಾತನಿಗೆ ದೃಷ್ಟಿ ದೋಷವಿದ್ದು ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಮತ್ತೊಬ್ಬ  ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಕೂಲಿ ಮಾಡಿ ಬಂದ ಹಣ ಜೀವನ ನಿರ್ವಹಣೆಗೇ ಸಾಲುತ್ತಿಲ್ಲ. ಹಾಗಿದ್ದರೂ ಪುಟ್ಟ ಮನೆಯೊಂದನ್ನು ಕಟ್ಟುವ ಹಂಬಲ ಸುಮತಿ ಅವರದಾಗಿತ್ತು. ಪುತ್ತಿಲ ಪರಿವಾರದ ಸುಳ್ಯ ಘಟಕದ ಸಹೃದಯಿಗಳು ಸುಮತಿ ಅವರ ಮನೆಯ ಪರಿಸ್ಥಿತಿ ಗಮನಿಸಿ ಮನೆ ಕಟ್ಟುವ ಕನಸಿಗೆ ಆಸರೆಯಾದರು. ಇದರ ಜೊತೆಗೆ ಸ್ಥಳೀಯಾಡಳಿತ , ಪ್ರತಿನಿಧಿಗಳನ್ನೂ ಮಾತನಾಡಿಸಿದರು. ಈಗ ಮಹಿಳೆ ಸುಮತಿ ಅವರ  ಪುಟ್ಟ ಮನೆ ಕಟ್ಟುವ ಕನಸಿಗೆ ಕಲ್ಲು, ಸಿಮೆಂಟು, ಹೊಯಿಗೆ, ಕಬ್ಬಿಣ…, ಹೀಗೆ  ಸಹಾಯ ಮಾಡಿದರೆ ಮನೆ ಸುಲಭದಲ್ಲಿ ನಿರ್ಮಾಣವಾದೀತು. ಅದಕ್ಕಾಗಿ ನೆರವು ಅಗತ್ಯ ಇದೆ.

The Sullia Unit of Puttila Parivar has now come to help a woman living in a very small hut in Shantinagar, Kasaba village of Sullia taluk. Friends can join hands with them. Sumathi’s situation is very difficult.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

5 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

6 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

19 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

19 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

20 hours ago