Advertisement
The Rural Mirror ಕಾಳಜಿ

ಸುಳ್ಯದಲ್ಲೊಂದು ಗುಡಿಸಲು ಮನೆ | ಪುತ್ತಿಲ ಪರಿವಾರದ ಸುಳ್ಯ ಘಟಕದಿಂದ ಮನೆ ಕನಸಿಗೆ ನೆರವು | ಸಹೃದಯಿಗಳು ನೆರವು ನೀಡಿ |

Share

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಶಾಂತಿನಗರದಲ್ಲಿ ತೀರಾ ಚಿಕ್ಕದಾದ ಗುಡಿಸಲು ಮನೆಯಲ್ಲಿರುವ ಮಹಿಳೆಯೊಬ್ಬರ ಮನೆಯ ಕನಸಿಗೆ ಪುತ್ತಿಲ ಪರಿವಾರದ ಸುಳ್ಯ ಘಟಕವು ಈಗ ನೆರವಿಗೆ ಇಳಿದಿದೆ. ಇವರ ಜೊತೆ ಸಹೃದಯಿಗಳು ಕೈಜೋಡಿಸಬಹುದು.  ಈ ಮಹಿಳೆ ಸುಮತಿ ಅವರ ಪರಿಸ್ಥಿತಿ ತೀರಾ ಸಂಕಷ್ಟದಿಂದ ಕೂಡಿದೆ.

ಮಹಿಳೆಯ ಪತಿ ಗಣೇಶ ಅಸೌಖ್ಯದ ಕಾರಣದಿಂದಾಗಿ ಇಹಲೋಕ ತ್ಯಜಿಸಿ ಹಲವು ವರ್ಷಗಳಾಗಿವೆ. ಮೂವರು ಮಕ್ಕಳೊಂದಿಗೆ ಮಹಿಳೆಯ ವಾಸ. ಆದರೆ ಮೂರು ಮಕ್ಕಳಲ್ಲಿ ಒಬ್ಬಾತನಿಗೆ ದೃಷ್ಟಿ ದೋಷವಿದ್ದು ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಮತ್ತೊಬ್ಬ  ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಕೂಲಿ ಮಾಡಿ ಬಂದ ಹಣ ಜೀವನ ನಿರ್ವಹಣೆಗೇ ಸಾಲುತ್ತಿಲ್ಲ. ಹಾಗಿದ್ದರೂ ಪುಟ್ಟ ಮನೆಯೊಂದನ್ನು ಕಟ್ಟುವ ಹಂಬಲ ಸುಮತಿ ಅವರದಾಗಿತ್ತು. ಪುತ್ತಿಲ ಪರಿವಾರದ ಸುಳ್ಯ ಘಟಕದ ಸಹೃದಯಿಗಳು ಸುಮತಿ ಅವರ ಮನೆಯ ಪರಿಸ್ಥಿತಿ ಗಮನಿಸಿ ಮನೆ ಕಟ್ಟುವ ಕನಸಿಗೆ ಆಸರೆಯಾದರು. ಇದರ ಜೊತೆಗೆ ಸ್ಥಳೀಯಾಡಳಿತ , ಪ್ರತಿನಿಧಿಗಳನ್ನೂ ಮಾತನಾಡಿಸಿದರು. ಈಗ ಮಹಿಳೆ ಸುಮತಿ ಅವರ  ಪುಟ್ಟ ಮನೆ ಕಟ್ಟುವ ಕನಸಿಗೆ ಕಲ್ಲು, ಸಿಮೆಂಟು, ಹೊಯಿಗೆ, ಕಬ್ಬಿಣ…, ಹೀಗೆ  ಸಹಾಯ ಮಾಡಿದರೆ ಮನೆ ಸುಲಭದಲ್ಲಿ ನಿರ್ಮಾಣವಾದೀತು. ಅದಕ್ಕಾಗಿ ನೆರವು ಅಗತ್ಯ ಇದೆ.

The Sullia Unit of Puttila Parivar has now come to help a woman living in a very small hut in Shantinagar, Kasaba village of Sullia taluk. Friends can join hands with them. Sumathi’s situation is very difficult.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

46 minutes ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

1 hour ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

2 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

2 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

2 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

19 hours ago