Advertisement
The Rural Mirror ಕಾಳಜಿ

ಸುಳ್ಯದಲ್ಲೊಂದು ಗುಡಿಸಲು ಮನೆ | ಪುತ್ತಿಲ ಪರಿವಾರದ ಸುಳ್ಯ ಘಟಕದಿಂದ ಮನೆ ಕನಸಿಗೆ ನೆರವು | ಸಹೃದಯಿಗಳು ನೆರವು ನೀಡಿ |

Share

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಶಾಂತಿನಗರದಲ್ಲಿ ತೀರಾ ಚಿಕ್ಕದಾದ ಗುಡಿಸಲು ಮನೆಯಲ್ಲಿರುವ ಮಹಿಳೆಯೊಬ್ಬರ ಮನೆಯ ಕನಸಿಗೆ ಪುತ್ತಿಲ ಪರಿವಾರದ ಸುಳ್ಯ ಘಟಕವು ಈಗ ನೆರವಿಗೆ ಇಳಿದಿದೆ. ಇವರ ಜೊತೆ ಸಹೃದಯಿಗಳು ಕೈಜೋಡಿಸಬಹುದು.  ಈ ಮಹಿಳೆ ಸುಮತಿ ಅವರ ಪರಿಸ್ಥಿತಿ ತೀರಾ ಸಂಕಷ್ಟದಿಂದ ಕೂಡಿದೆ.

ಮಹಿಳೆಯ ಪತಿ ಗಣೇಶ ಅಸೌಖ್ಯದ ಕಾರಣದಿಂದಾಗಿ ಇಹಲೋಕ ತ್ಯಜಿಸಿ ಹಲವು ವರ್ಷಗಳಾಗಿವೆ. ಮೂವರು ಮಕ್ಕಳೊಂದಿಗೆ ಮಹಿಳೆಯ ವಾಸ. ಆದರೆ ಮೂರು ಮಕ್ಕಳಲ್ಲಿ ಒಬ್ಬಾತನಿಗೆ ದೃಷ್ಟಿ ದೋಷವಿದ್ದು ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಮತ್ತೊಬ್ಬ  ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಕೂಲಿ ಮಾಡಿ ಬಂದ ಹಣ ಜೀವನ ನಿರ್ವಹಣೆಗೇ ಸಾಲುತ್ತಿಲ್ಲ. ಹಾಗಿದ್ದರೂ ಪುಟ್ಟ ಮನೆಯೊಂದನ್ನು ಕಟ್ಟುವ ಹಂಬಲ ಸುಮತಿ ಅವರದಾಗಿತ್ತು. ಪುತ್ತಿಲ ಪರಿವಾರದ ಸುಳ್ಯ ಘಟಕದ ಸಹೃದಯಿಗಳು ಸುಮತಿ ಅವರ ಮನೆಯ ಪರಿಸ್ಥಿತಿ ಗಮನಿಸಿ ಮನೆ ಕಟ್ಟುವ ಕನಸಿಗೆ ಆಸರೆಯಾದರು. ಇದರ ಜೊತೆಗೆ ಸ್ಥಳೀಯಾಡಳಿತ , ಪ್ರತಿನಿಧಿಗಳನ್ನೂ ಮಾತನಾಡಿಸಿದರು. ಈಗ ಮಹಿಳೆ ಸುಮತಿ ಅವರ  ಪುಟ್ಟ ಮನೆ ಕಟ್ಟುವ ಕನಸಿಗೆ ಕಲ್ಲು, ಸಿಮೆಂಟು, ಹೊಯಿಗೆ, ಕಬ್ಬಿಣ…, ಹೀಗೆ  ಸಹಾಯ ಮಾಡಿದರೆ ಮನೆ ಸುಲಭದಲ್ಲಿ ನಿರ್ಮಾಣವಾದೀತು. ಅದಕ್ಕಾಗಿ ನೆರವು ಅಗತ್ಯ ಇದೆ.

The Sullia Unit of Puttila Parivar has now come to help a woman living in a very small hut in Shantinagar, Kasaba village of Sullia taluk. Friends can join hands with them. Sumathi’s situation is very difficult.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

5 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

6 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

23 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago