Advertisement
The Rural Mirror ಕಾಳಜಿ

ಸುಳ್ಯದಲ್ಲೊಂದು ಗುಡಿಸಲು ಮನೆ | ಪುತ್ತಿಲ ಪರಿವಾರದ ಸುಳ್ಯ ಘಟಕದಿಂದ ಮನೆ ಕನಸಿಗೆ ನೆರವು | ಸಹೃದಯಿಗಳು ನೆರವು ನೀಡಿ |

Share

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಶಾಂತಿನಗರದಲ್ಲಿ ತೀರಾ ಚಿಕ್ಕದಾದ ಗುಡಿಸಲು ಮನೆಯಲ್ಲಿರುವ ಮಹಿಳೆಯೊಬ್ಬರ ಮನೆಯ ಕನಸಿಗೆ ಪುತ್ತಿಲ ಪರಿವಾರದ ಸುಳ್ಯ ಘಟಕವು ಈಗ ನೆರವಿಗೆ ಇಳಿದಿದೆ. ಇವರ ಜೊತೆ ಸಹೃದಯಿಗಳು ಕೈಜೋಡಿಸಬಹುದು.  ಈ ಮಹಿಳೆ ಸುಮತಿ ಅವರ ಪರಿಸ್ಥಿತಿ ತೀರಾ ಸಂಕಷ್ಟದಿಂದ ಕೂಡಿದೆ.

ಮಹಿಳೆಯ ಪತಿ ಗಣೇಶ ಅಸೌಖ್ಯದ ಕಾರಣದಿಂದಾಗಿ ಇಹಲೋಕ ತ್ಯಜಿಸಿ ಹಲವು ವರ್ಷಗಳಾಗಿವೆ. ಮೂವರು ಮಕ್ಕಳೊಂದಿಗೆ ಮಹಿಳೆಯ ವಾಸ. ಆದರೆ ಮೂರು ಮಕ್ಕಳಲ್ಲಿ ಒಬ್ಬಾತನಿಗೆ ದೃಷ್ಟಿ ದೋಷವಿದ್ದು ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದಾನೆ. ಮತ್ತೊಬ್ಬ  ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಕೂಲಿ ಮಾಡಿ ಬಂದ ಹಣ ಜೀವನ ನಿರ್ವಹಣೆಗೇ ಸಾಲುತ್ತಿಲ್ಲ. ಹಾಗಿದ್ದರೂ ಪುಟ್ಟ ಮನೆಯೊಂದನ್ನು ಕಟ್ಟುವ ಹಂಬಲ ಸುಮತಿ ಅವರದಾಗಿತ್ತು. ಪುತ್ತಿಲ ಪರಿವಾರದ ಸುಳ್ಯ ಘಟಕದ ಸಹೃದಯಿಗಳು ಸುಮತಿ ಅವರ ಮನೆಯ ಪರಿಸ್ಥಿತಿ ಗಮನಿಸಿ ಮನೆ ಕಟ್ಟುವ ಕನಸಿಗೆ ಆಸರೆಯಾದರು. ಇದರ ಜೊತೆಗೆ ಸ್ಥಳೀಯಾಡಳಿತ , ಪ್ರತಿನಿಧಿಗಳನ್ನೂ ಮಾತನಾಡಿಸಿದರು. ಈಗ ಮಹಿಳೆ ಸುಮತಿ ಅವರ  ಪುಟ್ಟ ಮನೆ ಕಟ್ಟುವ ಕನಸಿಗೆ ಕಲ್ಲು, ಸಿಮೆಂಟು, ಹೊಯಿಗೆ, ಕಬ್ಬಿಣ…, ಹೀಗೆ  ಸಹಾಯ ಮಾಡಿದರೆ ಮನೆ ಸುಲಭದಲ್ಲಿ ನಿರ್ಮಾಣವಾದೀತು. ಅದಕ್ಕಾಗಿ ನೆರವು ಅಗತ್ಯ ಇದೆ.

The Sullia Unit of Puttila Parivar has now come to help a woman living in a very small hut in Shantinagar, Kasaba village of Sullia taluk. Friends can join hands with them. Sumathi’s situation is very difficult.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

3 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago