Advertisement
The Rural Mirror ವಾರದ ವಿಶೇಷ

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

Share

ಭಾರತವು 5 ವರ್ಷಗಳಲ್ಲಿ 5.3 ಮಿಲಿಯನ್ ಮರಗಳನ್ನು ಕಳೆದುಕೊಂಡಿದೆ. ಅಂದರೆ 5 ವರ್ಷಗಳಲ್ಲಿ ಅಂದಾಜು 11 ಪ್ರತಿಶತದಷ್ಟು ದೊಡ್ಡ ಮರಗಳು  ಕಣ್ಮರೆಯಾಗಿವೆ. ಇದೊಂದು ಅಧ್ಯಯನ ವರದಿ ಈಚೆಗೆ ಪ್ರಕಟವಾಗಿದೆ. ಕೃಷಿಯಿಂದಾಗಿ ಹೆಚ್ಚು  ಮರಗಳು ನಾಶವಾಗಿದೆ ಎನ್ನುವುದು ಈ ವರದಿಯಲ್ಲಿ ಕಂಡುಬಂದಿರುವ ಅಂಶವಾಗಿದೆ.

2018 ರಿಂದ 2022 ರವರೆಗೆ ಭಾರತದಲ್ಲಿ ಐದು ಮಿಲಿಯನ್ ದೊಡ್ಡ ಕೃಷಿ ಭೂಮಿ ಮರಗಳನ್ನು ಕೃಷಿಯ ಕಾರಣಕ್ಕೆ  ಕಡಿಯಲಾಯಿತು, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಗಮನಾರ್ಹ ನಷ್ಟವಾಗಿದೆ. ಈ ಹಿಂದೆ 2010-2011ರಲ್ಲಿ ಮ್ಯಾಪ್ ಮಾಡಲಾದ ಭಾರತದ ಸುಮಾರು 11% ದೊಡ್ಡ ಮರಗಳು 2018 ರ ವೇಳೆಗೆ ಕಣ್ಮರೆಯಾಗಿವೆ.  ಡೆನ್ಮಾರ್ಕ್ ಮೂಲದ ಸಂಶೋಧಕರು ಮ್ಯಾಪ್ ಮಾಡಿ ಗಮನಿಸಿದ್ದರು.

ಪರಿಸರ ಉಳಿವಿನ ಬಗೆಗಿನ ಸಂಸ್ಥೆಯ ಅಧ್ಯಯನವು ಆತಂಕಕಾರಿಯಾದ ಅಂಶಗಳನ್ನು ಹೇಳಿದೆ. Nature Sustainability journal ನಲ್ಲಿ ಈ ಅಂಶ ಪ್ರಕಟವಾಗಿದೆ. ಈಚೆಗೆ ಅರಣ್ಯ ನಾಶದ ಪ್ರಮಾಣವು ಹೆಚ್ಚಾಗುತ್ತಿದೆ. ವಿಶೇಷವಾಗಿ ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ, ಕೆಲವು ಪ್ರದೇಶಗಳಲ್ಲಿ ಅರ್ಧದಷ್ಟು ಮರಗಳನ್ನು ಕಳೆದುಕೊಂಡಿವೆ. ಮಧ್ಯ ಭಾರತವು ಅತಿ ಹೆಚ್ಚು ಅರಣ್ಯನಾಶದ ಪ್ರಮಾಣವನ್ನು ಅನುಭವಿಸುತ್ತಿದೆ.ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಹರಿಯಾಣ ಮತ್ತು ಕಾಶ್ಮೀರದಂತಹ ರಾಜ್ಯಗಳಾದ್ಯಂತ ಗಮನಿಸಿದ ಅಧ್ಯಯನ ತಂಡವು ಗ್ರಾಮದ ಜನರ ಜೊತೆ ಮಾತುಕತೆ ನಡೆಸಿದೆ. ಎಲ್ಲಾ ಕಡೆಯೂ ಕೂಡಾ ಭತ್ತದ ಗದ್ದೆಗಳನ್ನು ವಿಸ್ತರಿಸಲು ಮತ್ತು ಬೆಳೆಗಳ ಇಳುವರಿಯನ್ನು ಹೆಚ್ಚಿಸಲು ಮರಗಳನ್ನು ಕಡಿಯಲಾಗಿದೆ ಎಂಬ ಅಂಶ ಬಹಿರಂಗವಾಗಿದೆ.

2018 ಮತ್ತು 2022 ರ ನಡುವೆ, ಸುಮಾರು 53 ಲಕ್ಷ ಮರಗಳು ಭಾರತದಲ್ಲಿ ನಾಶವಾಗಿದೆ. ಅಂದರೆ ಪ್ರತಿ ಚದರ ಕಿಲೋಮೀಟರ್‌ಗೆ ಸರಾಸರಿ 2.7 ಮರಗಳು ನಷ್ಟವಾಗಿವೆ. ವಿಶೇಷವಾಗಿ  ಮಣ್ಣಿನ ಫಲವತ್ತತೆಯನ್ನು ಹೆಚ್ಚು ಮಾಡುವ ಮರಗಳೇ ನಾಶವಾಗಿರುವುದು ಕಂಡುಬಂದಿದೆ.

ಏಕೆ ಮರಗಳು ನಾಶವಾಯಿತು ಎಂದು ಸಂಶೋಧಕರು ಮತ್ತಷ್ಟು ಗಮನಹರಿಸಿದಾಗ,  ಕೃಷಿ ವಿಧಾನಗಳಲ್ಲಿನ ಬದಲಾವಣೆಯೇ ಪ್ರಾಥಮಿಕ ಕಾರಣ ಎಂದು ಹೇಳಿದ್ದಾರೆ. ನೀರಾವರಿ ಸಂಪನ್ಮೂಲಗಳು ಹೆಚ್ಚಾದಂತೆ, ಹೆಚ್ಚಿನ ಮರಗಳು ಕೃಷಿಗೆ ಹಾನಿಯಾಗುತ್ತದೆ, ನೆರಳಿನ ಕಾರಣದಿಂದ ಇಳುವರಿ ಕಡಿಮೆಯಾಗುತ್ತದೆ ಎಂದು ಕಡಿದು ಹಾಕಲಾಗಿದೆ.

ಸ್ಥಳೀಯರ , ಗ್ರಾಮೀಣ ಭಾಗದ ಕೃಷಿಕರ ಪ್ರಕಾರ, ಹವಾಮಾನ ಬದಲಾವಣೆಯ ಕಾರಣದಿಂದ ಮರಗಳ  ನಾಶವಾಗಲು ಮುಖ್ಯ ಕಾರಣವಲ್ಲ. ಕೃಷಿ ಪದ್ಧತಿಯಲ್ಲಿನ ಬದಲಾವಣೆಯೇ ಮುಖ್ಯ ಕಾರಣ. ಈಗ ಸ್ಥಳೀಯ ಮರಗಳು ಹೊಲಗಳಲ್ಲಿ ಅಪರೂಪವಾಗಿವೆ ಎನ್ನುತ್ತಾರೆ.

ಮರಗಳ ಸಂಖ್ಯೆ ಕಡಿಮೆಯಾದಂತೆಯೇ ಹವಾಮಾನ ಪರಿಸ್ಥಿತಿಯೂ ಬದಲಾಗುತ್ತಿದೆ. ಹೀಗಾಗಿ ನೀರಿನ ಲಭ್ಯತೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಕೃಷಿಯ ಮೇಲೆಯೇ ಮತ್ತೆ ಪರಿಣಾಮ ಬೀರುತ್ತಿದೆ.  ಕೃಷಿ ವಿಸ್ತರಣೆ ಹಾಗೂ ಅವೈಜ್ಞಾನಿಕವಾದ ಬೆಳವಣಿಗೆಯ ಕಾರಣದಿಂದ ಅರಣ್ಯ ನಾಶ ಹಾಗೂ ಹವಾಮಾನ ಬದಲಾವಣೆಗೆ ಪ್ರಮುಖ ಕಾರಣವಾಗುತ್ತಿದೆ ಎಂದು ಪರಿಗಣಿಸಲಾಗಿದೆ.

ಪರಿಸರವನ್ನು, ಜೀವವೈವಿಧ್ಯತೆಯನ್ನು ಉತ್ತೇಜಿಸುವ ಕೆಲಸ ನಡೆಯಬೇಕಿದೆ. ಸದ್ಯ ಕೃಷಿಯ ಮೂಲಕವೇ ಅರಣ್ಯ ಉಳಿಸುವ, ಬೆಳೆಸುವ ಕಾರ್ಯ ಮತ್ತೆ ಆಗಬೇಕಿದೆ.

( ಈ ಸುದ್ದಿಯ ಹೆಡ್ಡಿಂಗ್‌ ಹಾಗೂ ಚಿತ್ರವನ್ನು ಮಾತ್ರಾ ದ ರೂರಲ್‌ ಮಿರರ್.ಕಾಂ ಮಾಡಿದೆ. ಉಳಿದ ವಿಷಯಗಳು ಸುದ್ದಿಮೂಲಗಳಿಂದ ಪಡೆಯಲಾಗಿದೆ ) 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

4 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

11 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

19 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago