Advertisement
Opinion

ಸಹಕಾರಿ ಸಂಘ ಸುಭದ್ರ ಅಂತ ಪರಿಗಣನೆ ಹೇಗೆ..?

Share

ನಮ್ಮಲ್ಲಿನ ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ ಸಂಗ್ರಹ ಮತ್ತು ಸದಸ್ಯರಿಗೆ ಸಾಲ ವಿತರಣೆ. ಸಹಕಾರ ಸಂಘದ ವ್ಯವಹಾರ ಸದಸ್ಯರೊಳಗೆ ಮಾತ್ರ ಇರಬೇಕು ಎಂಬುದು ತಾತ್ವಿಕ‌ ನಿಯಮ. ಸಂಘದ ಸದಸ್ಯರಾಗಬೇಕಾದರೆ ಸಂಘದ ಶೇರು ಪತ್ರ ಪಡೆಯುವುದೂ ಕಡ್ಡಾಯ. ಪ್ರತಿಯೋರ್ವ ಸದಸ್ಯನೂ ಕನಿಷ್ಟ ಒಂದು ಶೇರು ( ಪಾಲು ಬಂಡವಾಳ ಪತ್ರ) ಹೊಂದಿರಬೇಕಾದ್ದು ಅಪೇಕ್ಷಣೀಯ.
ಪಾಲು ಬಂಡವಾಳ ಎಂಬುದು ಸಂಘದ ಮೂಲಧನ. ಸಂಘ ಗಳಿಸಿದ ಲಾಭದಲ್ಲಿ ಪ್ರತಿಯೋರ್ವ ಸದಸ್ಯನಿಗೂ ಅವರವರು ಹೊಂದಿರುವ ಪಾಲು ಬಂಡವಾಳದ ಮೇಲೆ ನಿಯಮಗಳ ಅನುಸಾರ ಲಾಭಾಂಶ ಕೊಡಬೇಕಾಗ್ತದೆ. ಸಂಘ ನಷ್ಟದಲ್ಲಿ ಇದ್ದರೆ ಅಥವಾ ಕನಿಷ್ಟ ಲಾಭದಲ್ಲಿ ಇದ್ದರೆ ಲಾಭಾಂಶ ಘೋಷಣೆ ಇಲ್ಲ.

ಸಂಘ ನಷ್ಟದಲ್ಲಿ ಇದ್ದಾಗ ಅಥವಾ ಕನಿಷ್ಟ ಲಾಭದಲ್ಲಿ ಇರುವಾಗ ಹೆಚ್ಚು ಪಾಲುಬಂಡವಾಳ ಇದ್ದಷ್ಟೂ ಸಂಘಕ್ಕೆ ಲಾಭ. ಯಾಕೆಂದರೆ ಆ ಹಣಕ್ಕೆ ಪ್ರತಿಫಲ‌ ಕೊಡುವುದು ಕಡ್ಡಾಯವಲ್ಲ. ನಿರಖು ಠೇವಣಿಗಾದರೆ ಕಡ್ಡಾಯವಾಗಿ ಬಡ್ಡಿ ಹಣ ಕೊಡಲೇ ಬೇಕು. ಅದೇ ಸಂಘ ಗರಿಷ್ಟ ಲಾಭ ಗಳಿಸುವ ಸ್ಥಿತಿಯಲ್ಲಿ ಇದ್ದಾಗ ಪಾಲು ಬಂಡವಾಳದ ಪ್ರಮಾಣ ಕಡಿಮೆ ಮಾಡಿ ,ನಿರಖು ಠೇವಣಿಯ ಪ್ರಮಾಣ ಹೆಚ್ಚಿರುವಂತೆ ನೋಡಿಕೊಳ್ಳುವುದು ಲಾಭ.

ನಿರಖು ಠೇವಣಿ ಮತ್ತು ಪಾಲು ಬಂಡವಾಳದ ಮೇಲೆ ಸದಸ್ಯರಿಗೆ ಇರುವ ವ್ಯತ್ಯಾಸ ಇದು. ನಿರಖು ಠೇವಣಿಯಲ್ಲಿ ನಿರ್ಧರಿತ ಬಡ್ಡಿದರ ಸಂಘ ಕೊಡಲೇ ಬೇಕು. ಸಂಘದ ಲಾಭದ ಪ್ರಶ್ನೆ ಇಲ್ಲ. ಪಾಲುಬಂಡವಾಳದ ಮೇಲೆ ಸಂಘ ಲಾಭದಲ್ಲಿ ಇದ್ದರೆ ಮಾತ್ರ ಲಾಭಾಂಶ ಕೊಟ್ಟರೆ ಸಾಕು. ನಿರಖು ಠೇವಣಿಯ ಮೇಲೆ ಸಂಘ ಯಾವ ಬಡ್ಡಿದರ ಕೊಡುತ್ತದೆಯೋ ಅದಕ್ಕಿಂತಲೂ ಹೆಚ್ಚು ಲಾಭಾಂಶ ಪಾಲು ಬಂಡವಾಳದ ಮೇಲೆ ಘೋಷಿಸಿದರೆ ಸಂಘ ಸುಧೃಢ ಅಂತಲೇ ಪರಿಗಣಿಸುವುದು. ಸದಸ್ಯರಿಗೂ ಅಂತಹ ಸಂದರ್ಭದಲ್ಲಿ ನಿರಖು ಠೇವಣಿ ಇಡುವುದಕ್ಕಿಂತಲೂ ಪಾಲು ಬಂಡವಾಳದ ಮೇಲೆ ಹಣ ಹೂಡುವುದು ಲಾಭದಾಯಕ. ಆದ್ದರಿಂದ ಗರಿಷ್ಟ ಲಾಭಾಂಶ ಘೋಷಣೆ ಸಂಘದ ಆಡಳಿತ ಮಂಡಳಿಯ ಪ್ರತಿಷ್ಟೆಯ ವಿಷಯವಾಗಿ ಬಿಡ್ತದೆ.

ವಾಸ್ತವದಲ್ಲಿ ಸಹಕಾರ ಸಂಘದಲ್ಲಿ ಸದಸ್ಯರು ಒಂದಕ್ಕಿಂತಲೂ ಹೆಚ್ಚು ಪಾಲು ಬಂಡವಾಳ ಪತ್ರ ಹೊಂದುವುದು ಸಾಲ ಪಡೆದುಕೊಂಡಾಗ ಮಾತ್ರ. ಸಂಘದ ಆರಂಭದ ಕಾಲದಲ್ಲಿ ಸಂಘ ದುರ್ಬಲವಾಗಿರುವುದು ಸಹಜ. ಆದ್ದರಿಂದ ಸಂಘ ಸದಸ್ಯರಿಂದ ಕಡ್ಡಾಯವಾಗಿ ಹೆಚ್ಚುವರಿ ಪಾಲು ಬಂಡವಾಳ ಪಡೆದುಕೊಳ್ತದೆ. ಸದಸ್ಯರು ಸಾಲ ಪಡೆದುಕೊಳ್ಳ ಬೇಕಾದರೆ ಸಾಲದ ಮೊತ್ತದ ಮೇಲೆ ಕನಿಷ್ಟ ಪಾಲು ಬಂಡವಾಳ ಇರಲೇ ಬೇಕು ಅಂತ ನಿಯಮ ,ಈ ಕಾರಣಕ್ಕಾಗಿ, ಸಂಘ ಮಾಡುತ್ತದೆ.

ಸಂಘದ ಆಡಳಿತ ಮಂಡಳಿಗೆ ಸ್ವಪ್ರತಿಷ್ಟೆಯೇ ಮುಖ್ಯವಾದಾಗ ಕೃತಕವಾಗಿ ವಾಸ್ತವ ಸಾಮರ್ಥ್ಯಕ್ಕಿಂತಲೂ ಹೆಚ್ಚು ಲಾಭಾಂಶ ಘೋಷಣೆಯ ಪ್ರಯತ್ನಕ್ಕಿಳಿಯುತ್ತದೆ. ಇದಕ್ಕಾಗಿ ಅದು ಸಂಘದ ಪಾಲು ಬಂಡವಾಳದ ಪ್ರಮಾಣವನ್ನು ಇಳಿಸುವ ಯತ್ನ ಮಾಡುತ್ತದೆ. ಇದರಲ್ಲಿ ಅನೇಕಾನೇಕ ವಿಧಾನಗಳು ಇವೆ. ಒಬ್ಬೊಬ್ವರದ್ದು ಒಂದೊಂದು ತಂತ್ರ. ಸಾಲಕ್ಕಾಗಿ ಹೊಂದಿರಬೇಕಾದ ಪಾಲು ಬಂಡವಾಳ ಪತ್ರದ ಪ್ರಮಾಣ ಇಳಿಸುವುದು,ಸದಸ್ಯರು ಹೊಂದುವ ಪಾಲು ಪತ್ರದ ಒಟ್ಟು ಮೊತ್ತದ ಮೇಲೆ ಮಿತಿ ಹೇರುವುದು,ಸದಸ್ಯರು ಹೊಂದಿರುವ ಪಾಲು ಪತ್ರದ ಸಂಪೂರ್ಣ ಮೊತ್ತಕ್ಕೆ ಲಾಭಾಂಶ ಕೊಡದೇ ಇರುವುದು…….. ಹೀಗೇ ಅನೇಕಾನೇಕ ತಂತ್ರಗಳಿವೆ. ಈ ದಾರಿ ಆಡಳಿತ ಮಂಡಳಿ ಹಿಡಿದಾಗ ಲಾಭಾಂಶ ಘೋಷಣೆಯನ್ನು ತೀವ್ರವಾಗಿ ಏರಿಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ( ಪಕ್ಷದಲ್ಲಿ…?) ಪ್ರತಿಷ್ಟಿತ ಅಂತ ಅನಿಸಿಕೊಳ್ತದೆ.

Advertisement

ಕೆಲವೊಮ್ಮೆ ಸಹಕಾರ ಕ್ಷೇತ್ರದ ನಾಯಕರುಗಳೂ ಈ ತಂತ್ರಕ್ಕೆ ಬಲಿ ಬೀಳ್ತಾರೆ. ಈ ಮಾದರಿ ಕೃತಕವಾಗಿ ಹೆಚ್ಚಿಸಿದ ಲಾಭಾಂಶ ಘೋಷಣೆಯನ್ನು ” ಮಾದರಿ” ಅಂತ ಇತರರಿಗೆ ಬಣ್ಣಿಸುವುದೂ ಉಂಟು. ಈ ತಂತ್ರಗಳ ಅರಿವು ಇಲ್ಲದ ಇತರ ಸಹಕಾರಿಗಳು ತಾವು ಹಿನ್ನಡೆಯಲ್ಲಿದ್ದೇವೇನೋ ಅಂತ ನಿರಾಶರಾಗುವುದೂ ಉಂಟು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

13 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

14 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

14 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

14 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

14 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago