ಎಳನೀರು ಧಾರಣೆ ಕುಸಿತ | ಬಿಸಿಲು ಆರಂಭದ ಮುನ್ನವೇ ಧಾರಣೆ ಕುಸಿತ |

January 23, 2023
2:41 PM

ರೈತರು ಧಾರಣೆ ಕುಸಿತದ ಸಂಕಷ್ಟ ಅನುಭವಿಸುತ್ತಿರುವಾಗಲೇ ಇದೀಗ ತೆಂಗು ಕೂಡಾ ಕೈಕೊಡುತ್ತಿದೆ. ಬೇಸಿಗೆ ಆರಂಭದ ಮುನ್ನ ಎಳನೀರು ಧಾರಣೆ ಕುಸಿತವಾಗಿದೆ.  ಮಂಡ್ಯದಲ್ಲಿ  ಭತ್ತ, ರಾಗಿ ಖರೀದಿ ಆರಂಭಗೊಳ್ಳದೆ ರೈತರು ಸಂಕಷ್ಟ ಎದುರಿಸುತ್ತಿರುವ ಸಮಯದಲ್ಲೇ ಎಳನೀರು ಧಾರಣೆಯೂ ತೀವ್ರಗತಿಯಲ್ಲಿ ಕುಸಿತಕ್ಕೊಳಗಾಗಿದೆ.

ರಾಜ್ಯದಲ್ಲಿ  ಬೇಸಗೆಯ ವಾತಾವರಣ ಹೆಚ್ಚಿದಂತೆ ಇಲ್ಲಿ ಎಳನೀರು ಬೇಡಿಕೆ ಹೆಚ್ಚಾಗುತ್ತಿದೆ.  ಇದೇ ವೇಳೆ ಇಲ್ಲಿನ ಚಳಿ ಹೆಚ್ಚಾಗುತ್ತಿದ್ದಂತೆಯೇ ಉತ್ತರ ಭಾರತದ ಹಾಗೂ ಇತರ ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ಉತ್ತರ ಭಾರತದಲ್ಲಿ ಶೀತ ಹೆಚ್ಚಿರುವ ಕಾರಣ ಏಷ್ಯಾದಲ್ಲೇ ಅತಿ ದೊಡ್ಡ ಎಳನೀರು ಮಾರುಕಟ್ಟೆ ಎನಿಸಿರುವ ಮದ್ದೂರಿನ ಎಳನೀರು ಮಾರುಕಟ್ಟೆಯಲ್ಲಿ ಧಾರಣೆ ಕುಸಿತಗೊಂಡಿದೆ. ಸಾಮಾನ್ಯ ದಿನಗಳಲ್ಲಿ ಪ್ರತಿ ಎಳನೀರು ಗಾತ್ರವನ್ನು ಆಧರಿಸಿ ಕನಿಷ್ಠ ರೂ .19 ನಿಂದ ರೂ.23 ವರೆಗೆ ಮಾರಾಟವಾಗುತ್ತಿತ್ತು. ಇದೀಗ ಎಳನೀರು ಧಾರಣೆ ರೂ .16ಗೆ ಕುಸಿದಿರುವುದು ರೈತರು ನಷ್ಟ ಅನುಭವಿಸುವಂತಾಗಿದೆ.

Advertisement

ಪ್ರತಿದಿನ ಬೆಳಗಿನ ಜಾವ ಮತ್ತು ಸಂಜೆ ಹೊತ್ತು ಈಗ ರಾಜ್ಯದ ವಿವಿಧ ಕಡೆಗಳಲ್ಲಿ ಶೀತಗಾಳಿ ಬೀಸುತ್ತಿದೆ ಮತ್ತು ಚಳಿ ಆವರಿಸಿಕೊಳ್ಳುವುದು ಮುಂದುವರಿದಿದೆ. ಹೀಗಾಗಿ ಎಳನೀರು ಕುಡಿಯುವುದಕ್ಕೆ ಜನರು ಮನಸು ಮಾಡುತ್ತಿಲ್ಲ. ವಿವಿಧ ಜಿಲ್ಲೆಗಳಿಗೆ ಎಳನೀರು ಹೊರಜಿಲ್ಲೆಗಳಿಂದ  ಬರುತ್ತಿದೆ. ಫೆಬ್ರವರಿ ಮಧ್ಯಭಾಗದಿಂದ ಬಿಸಿಲಿನ ಬೇಗೆ ಏರಿಕೆಯಾದಂತೆ ಎಳನೀರಿಗೂ ಬೇಡಿಕೆ ಹೆಚ್ಚಳವಾಗುತ್ತದೆ ಎಂದು ವ್ಯಾಪಾರಿಗಳು ನಿರೀಕ್ಷಿಸುತ್ತಿದ್ದಾರೆ. ಸದ್ಯ ಚಳಿ ಇರುವುದರಿಂದ  ಬೇಡಿಕೆ ಕಡಿಮೆಯಾಗಿದೆ. ಬಿಸಿಲು ಹೆಚ್ಚಾದಂತೆ ಎಳನೀರಿಗೂ ಬೇಡಿಕೆ ಬಂದು ಸಾಮಾನ್ಯ ಸ್ಥಿತಿಗೆ ಬರುತ್ತದೆ ಎನ್ನುವ ವಿಶ್ವಾಸ ಇದೆ. ಬೇಡಿಕೆ ಹೆಚ್ಚಾದಂತೆ ಎಳನೀರು ದರವು ಏರಿಕೆಯಾಗುತ್ತದೆ. ಕಳೆದ ವರ್ಷ ಬೇಸಿಗೆಯಲ್ಲಿ ಒಂದು ಎಳನೀರು ದರ ಗರಿಷ್ಠ ರೂ.50 ಕ್ಕೆ ಮಾರಾಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror