ಸುದ್ದಿಗಳು

ಎಳನೀರು ಧಾರಣೆ ಕುಸಿತ | ಬಿಸಿಲು ಆರಂಭದ ಮುನ್ನವೇ ಧಾರಣೆ ಕುಸಿತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತರು ಧಾರಣೆ ಕುಸಿತದ ಸಂಕಷ್ಟ ಅನುಭವಿಸುತ್ತಿರುವಾಗಲೇ ಇದೀಗ ತೆಂಗು ಕೂಡಾ ಕೈಕೊಡುತ್ತಿದೆ. ಬೇಸಿಗೆ ಆರಂಭದ ಮುನ್ನ ಎಳನೀರು ಧಾರಣೆ ಕುಸಿತವಾಗಿದೆ.  ಮಂಡ್ಯದಲ್ಲಿ  ಭತ್ತ, ರಾಗಿ ಖರೀದಿ ಆರಂಭಗೊಳ್ಳದೆ ರೈತರು ಸಂಕಷ್ಟ ಎದುರಿಸುತ್ತಿರುವ ಸಮಯದಲ್ಲೇ ಎಳನೀರು ಧಾರಣೆಯೂ ತೀವ್ರಗತಿಯಲ್ಲಿ ಕುಸಿತಕ್ಕೊಳಗಾಗಿದೆ.

Advertisement

ರಾಜ್ಯದಲ್ಲಿ  ಬೇಸಗೆಯ ವಾತಾವರಣ ಹೆಚ್ಚಿದಂತೆ ಇಲ್ಲಿ ಎಳನೀರು ಬೇಡಿಕೆ ಹೆಚ್ಚಾಗುತ್ತಿದೆ.  ಇದೇ ವೇಳೆ ಇಲ್ಲಿನ ಚಳಿ ಹೆಚ್ಚಾಗುತ್ತಿದ್ದಂತೆಯೇ ಉತ್ತರ ಭಾರತದ ಹಾಗೂ ಇತರ ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ಉತ್ತರ ಭಾರತದಲ್ಲಿ ಶೀತ ಹೆಚ್ಚಿರುವ ಕಾರಣ ಏಷ್ಯಾದಲ್ಲೇ ಅತಿ ದೊಡ್ಡ ಎಳನೀರು ಮಾರುಕಟ್ಟೆ ಎನಿಸಿರುವ ಮದ್ದೂರಿನ ಎಳನೀರು ಮಾರುಕಟ್ಟೆಯಲ್ಲಿ ಧಾರಣೆ ಕುಸಿತಗೊಂಡಿದೆ. ಸಾಮಾನ್ಯ ದಿನಗಳಲ್ಲಿ ಪ್ರತಿ ಎಳನೀರು ಗಾತ್ರವನ್ನು ಆಧರಿಸಿ ಕನಿಷ್ಠ ರೂ .19 ನಿಂದ ರೂ.23 ವರೆಗೆ ಮಾರಾಟವಾಗುತ್ತಿತ್ತು. ಇದೀಗ ಎಳನೀರು ಧಾರಣೆ ರೂ .16ಗೆ ಕುಸಿದಿರುವುದು ರೈತರು ನಷ್ಟ ಅನುಭವಿಸುವಂತಾಗಿದೆ.

ಪ್ರತಿದಿನ ಬೆಳಗಿನ ಜಾವ ಮತ್ತು ಸಂಜೆ ಹೊತ್ತು ಈಗ ರಾಜ್ಯದ ವಿವಿಧ ಕಡೆಗಳಲ್ಲಿ ಶೀತಗಾಳಿ ಬೀಸುತ್ತಿದೆ ಮತ್ತು ಚಳಿ ಆವರಿಸಿಕೊಳ್ಳುವುದು ಮುಂದುವರಿದಿದೆ. ಹೀಗಾಗಿ ಎಳನೀರು ಕುಡಿಯುವುದಕ್ಕೆ ಜನರು ಮನಸು ಮಾಡುತ್ತಿಲ್ಲ. ವಿವಿಧ ಜಿಲ್ಲೆಗಳಿಗೆ ಎಳನೀರು ಹೊರಜಿಲ್ಲೆಗಳಿಂದ  ಬರುತ್ತಿದೆ. ಫೆಬ್ರವರಿ ಮಧ್ಯಭಾಗದಿಂದ ಬಿಸಿಲಿನ ಬೇಗೆ ಏರಿಕೆಯಾದಂತೆ ಎಳನೀರಿಗೂ ಬೇಡಿಕೆ ಹೆಚ್ಚಳವಾಗುತ್ತದೆ ಎಂದು ವ್ಯಾಪಾರಿಗಳು ನಿರೀಕ್ಷಿಸುತ್ತಿದ್ದಾರೆ. ಸದ್ಯ ಚಳಿ ಇರುವುದರಿಂದ  ಬೇಡಿಕೆ ಕಡಿಮೆಯಾಗಿದೆ. ಬಿಸಿಲು ಹೆಚ್ಚಾದಂತೆ ಎಳನೀರಿಗೂ ಬೇಡಿಕೆ ಬಂದು ಸಾಮಾನ್ಯ ಸ್ಥಿತಿಗೆ ಬರುತ್ತದೆ ಎನ್ನುವ ವಿಶ್ವಾಸ ಇದೆ. ಬೇಡಿಕೆ ಹೆಚ್ಚಾದಂತೆ ಎಳನೀರು ದರವು ಏರಿಕೆಯಾಗುತ್ತದೆ. ಕಳೆದ ವರ್ಷ ಬೇಸಿಗೆಯಲ್ಲಿ ಒಂದು ಎಳನೀರು ದರ ಗರಿಷ್ಠ ರೂ.50 ಕ್ಕೆ ಮಾರಾಟವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

9 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

17 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

17 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

20 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

2 days ago