Advertisement
ಸುದ್ದಿಗಳು

ಎಳನೀರು ಧಾರಣೆ ಕುಸಿತ | ಬಿಸಿಲು ಆರಂಭದ ಮುನ್ನವೇ ಧಾರಣೆ ಕುಸಿತ |

Share

ರೈತರು ಧಾರಣೆ ಕುಸಿತದ ಸಂಕಷ್ಟ ಅನುಭವಿಸುತ್ತಿರುವಾಗಲೇ ಇದೀಗ ತೆಂಗು ಕೂಡಾ ಕೈಕೊಡುತ್ತಿದೆ. ಬೇಸಿಗೆ ಆರಂಭದ ಮುನ್ನ ಎಳನೀರು ಧಾರಣೆ ಕುಸಿತವಾಗಿದೆ.  ಮಂಡ್ಯದಲ್ಲಿ  ಭತ್ತ, ರಾಗಿ ಖರೀದಿ ಆರಂಭಗೊಳ್ಳದೆ ರೈತರು ಸಂಕಷ್ಟ ಎದುರಿಸುತ್ತಿರುವ ಸಮಯದಲ್ಲೇ ಎಳನೀರು ಧಾರಣೆಯೂ ತೀವ್ರಗತಿಯಲ್ಲಿ ಕುಸಿತಕ್ಕೊಳಗಾಗಿದೆ.

ರಾಜ್ಯದಲ್ಲಿ  ಬೇಸಗೆಯ ವಾತಾವರಣ ಹೆಚ್ಚಿದಂತೆ ಇಲ್ಲಿ ಎಳನೀರು ಬೇಡಿಕೆ ಹೆಚ್ಚಾಗುತ್ತಿದೆ.  ಇದೇ ವೇಳೆ ಇಲ್ಲಿನ ಚಳಿ ಹೆಚ್ಚಾಗುತ್ತಿದ್ದಂತೆಯೇ ಉತ್ತರ ಭಾರತದ ಹಾಗೂ ಇತರ ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ಉತ್ತರ ಭಾರತದಲ್ಲಿ ಶೀತ ಹೆಚ್ಚಿರುವ ಕಾರಣ ಏಷ್ಯಾದಲ್ಲೇ ಅತಿ ದೊಡ್ಡ ಎಳನೀರು ಮಾರುಕಟ್ಟೆ ಎನಿಸಿರುವ ಮದ್ದೂರಿನ ಎಳನೀರು ಮಾರುಕಟ್ಟೆಯಲ್ಲಿ ಧಾರಣೆ ಕುಸಿತಗೊಂಡಿದೆ. ಸಾಮಾನ್ಯ ದಿನಗಳಲ್ಲಿ ಪ್ರತಿ ಎಳನೀರು ಗಾತ್ರವನ್ನು ಆಧರಿಸಿ ಕನಿಷ್ಠ ರೂ .19 ನಿಂದ ರೂ.23 ವರೆಗೆ ಮಾರಾಟವಾಗುತ್ತಿತ್ತು. ಇದೀಗ ಎಳನೀರು ಧಾರಣೆ ರೂ .16ಗೆ ಕುಸಿದಿರುವುದು ರೈತರು ನಷ್ಟ ಅನುಭವಿಸುವಂತಾಗಿದೆ.

ಪ್ರತಿದಿನ ಬೆಳಗಿನ ಜಾವ ಮತ್ತು ಸಂಜೆ ಹೊತ್ತು ಈಗ ರಾಜ್ಯದ ವಿವಿಧ ಕಡೆಗಳಲ್ಲಿ ಶೀತಗಾಳಿ ಬೀಸುತ್ತಿದೆ ಮತ್ತು ಚಳಿ ಆವರಿಸಿಕೊಳ್ಳುವುದು ಮುಂದುವರಿದಿದೆ. ಹೀಗಾಗಿ ಎಳನೀರು ಕುಡಿಯುವುದಕ್ಕೆ ಜನರು ಮನಸು ಮಾಡುತ್ತಿಲ್ಲ. ವಿವಿಧ ಜಿಲ್ಲೆಗಳಿಗೆ ಎಳನೀರು ಹೊರಜಿಲ್ಲೆಗಳಿಂದ  ಬರುತ್ತಿದೆ. ಫೆಬ್ರವರಿ ಮಧ್ಯಭಾಗದಿಂದ ಬಿಸಿಲಿನ ಬೇಗೆ ಏರಿಕೆಯಾದಂತೆ ಎಳನೀರಿಗೂ ಬೇಡಿಕೆ ಹೆಚ್ಚಳವಾಗುತ್ತದೆ ಎಂದು ವ್ಯಾಪಾರಿಗಳು ನಿರೀಕ್ಷಿಸುತ್ತಿದ್ದಾರೆ. ಸದ್ಯ ಚಳಿ ಇರುವುದರಿಂದ  ಬೇಡಿಕೆ ಕಡಿಮೆಯಾಗಿದೆ. ಬಿಸಿಲು ಹೆಚ್ಚಾದಂತೆ ಎಳನೀರಿಗೂ ಬೇಡಿಕೆ ಬಂದು ಸಾಮಾನ್ಯ ಸ್ಥಿತಿಗೆ ಬರುತ್ತದೆ ಎನ್ನುವ ವಿಶ್ವಾಸ ಇದೆ. ಬೇಡಿಕೆ ಹೆಚ್ಚಾದಂತೆ ಎಳನೀರು ದರವು ಏರಿಕೆಯಾಗುತ್ತದೆ. ಕಳೆದ ವರ್ಷ ಬೇಸಿಗೆಯಲ್ಲಿ ಒಂದು ಎಳನೀರು ದರ ಗರಿಷ್ಠ ರೂ.50 ಕ್ಕೆ ಮಾರಾಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

3 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

10 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

10 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

20 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

21 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago