ಚಳಿ ಹೇಗಿದೆ…? | ಉತ್ತರ ಭಾರತದಲ್ಲಿ ಚಳಿಯ ಪ್ರಭಾವ ಏನು..? | ರಾಜ್ಯದಲ್ಲಿ ತಗ್ಗಿದೆಯಾ ಚಳಿಯ ಪ್ರಭಾವ |

January 8, 2025
7:11 AM
ಉತ್ತರ ಭಾರತದಲ್ಲಿ ಶೀತಗಾಳಿ ಆವರಿಸಿದೆ. ದಟ್ಟವಾದ ಮಂಜು ರೈಲುಗಳು ಮತ್ತು ವಿಮಾನಗಳ ಓಡಾದ ಮೇಲೆ ಪರಿಣಾಮ ಬೀರುತ್ತಿದೆ. ವಿಳಂಬವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಚಳಿಯ ಪ್ರಭಾವ ಸದ್ಯ ತಗ್ಗಿದೆ.

ಜನವರಿ ತಿಂಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ ಎನ್ನುವ ವರದಿ ಈ ಹಿಂದೆ ಬಂದಿತ್ತು. ಇದೀಗ ರಾಜ್ಯದಲ್ಲಿ ಚಳಿಯ ಪ್ರಭಾವ ಕಡಿಮೆಯಾಗಿದೆ. ಆದರೆ ಉತ್ತರ ಭಾರತವನ್ನು ಶೀತದ ಅಲೆಯು ಆವರಿಸಿದೆ, ಬೆಳಿಗ್ಗೆ ದಟ್ಟವಾದ ಮಂಜಿನಿಂದ ಕೂಡಿರಲಿದ್ದು,  ಮುಂದಿನ 3-4 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬೆಳಿಗ್ಗೆ ಮತ್ತು ರಾತ್ರಿಯ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣವು ಬಾಧಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…..ಮುಂದೆ ಓದಿ….

Advertisement
Advertisement

ರಾಜ್ಯದ  ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಸಾಧ್ಯತೆ ಇದೆ.ಜನವರಿಯ ಆರಂಭವು ರಾಜ್ಯದಾದ್ಯಂತ ಶೀತ ಹವಾಮಾನವನ್ನು ಉಂಟುಮಾಡಿತ್ತು, ನಂತರ ಇನ್ನಷ್ಟು ಕುಸಿತದ ಸೂಚನೆ ಇತ್ತು. ಆದರೆ ಸದ್ಯ ಚಳಿಯ ಪ್ರಭಾವ ಈಗ ಕಡಿಮೆಯಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದ ಕೆಲವು ಕಡೆ ಶೀತ ಗಾಳಿಯ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಮಿಂಚು  ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ದೇಶದ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ದಟ್ಟವಾದ ಮಂಜಿನ ಸ್ಥಿತಿಯಿಂದಾಗಿ, ದೇಶದ ಉತ್ತರ ಪ್ರದೇಶದಲ್ಲಿ ಹಲವಾರು ರೈಲುಗಳು ಮತ್ತು ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿತು. ದೆಹಲಿಗೆ ಹೋಗುವ ಸುಮಾರು 25 ರೈಲುಗಳು ಐದರಿಂದ ಆರು ಗಂಟೆಗಳವರೆಗೆ ವಿಳಂಬವಾಗಿವೆ. ಏತನ್ಮಧ್ಯೆ, ಮಂಜಿನಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 50 ವಿಮಾನಗಳು ವಿಳಂಬವಾಗಿವೆ. ಆದರೆ, ಯಾವುದೇ ವಿಮಾನಗಳು ರದ್ದಾಗಿಲ್ಲ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror