ಚಳಿ ಹೇಗಿದೆ…? | ಉತ್ತರ ಭಾರತದಲ್ಲಿ ಚಳಿಯ ಪ್ರಭಾವ ಏನು..? | ರಾಜ್ಯದಲ್ಲಿ ತಗ್ಗಿದೆಯಾ ಚಳಿಯ ಪ್ರಭಾವ |

January 8, 2025
7:11 AM
ಉತ್ತರ ಭಾರತದಲ್ಲಿ ಶೀತಗಾಳಿ ಆವರಿಸಿದೆ. ದಟ್ಟವಾದ ಮಂಜು ರೈಲುಗಳು ಮತ್ತು ವಿಮಾನಗಳ ಓಡಾದ ಮೇಲೆ ಪರಿಣಾಮ ಬೀರುತ್ತಿದೆ. ವಿಳಂಬವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಚಳಿಯ ಪ್ರಭಾವ ಸದ್ಯ ತಗ್ಗಿದೆ.

ಜನವರಿ ತಿಂಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ ಎನ್ನುವ ವರದಿ ಈ ಹಿಂದೆ ಬಂದಿತ್ತು. ಇದೀಗ ರಾಜ್ಯದಲ್ಲಿ ಚಳಿಯ ಪ್ರಭಾವ ಕಡಿಮೆಯಾಗಿದೆ. ಆದರೆ ಉತ್ತರ ಭಾರತವನ್ನು ಶೀತದ ಅಲೆಯು ಆವರಿಸಿದೆ, ಬೆಳಿಗ್ಗೆ ದಟ್ಟವಾದ ಮಂಜಿನಿಂದ ಕೂಡಿರಲಿದ್ದು,  ಮುಂದಿನ 3-4 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬೆಳಿಗ್ಗೆ ಮತ್ತು ರಾತ್ರಿಯ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣವು ಬಾಧಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…..ಮುಂದೆ ಓದಿ….

Advertisement
Advertisement
Advertisement
Advertisement

ರಾಜ್ಯದ  ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಸಾಧ್ಯತೆ ಇದೆ.ಜನವರಿಯ ಆರಂಭವು ರಾಜ್ಯದಾದ್ಯಂತ ಶೀತ ಹವಾಮಾನವನ್ನು ಉಂಟುಮಾಡಿತ್ತು, ನಂತರ ಇನ್ನಷ್ಟು ಕುಸಿತದ ಸೂಚನೆ ಇತ್ತು. ಆದರೆ ಸದ್ಯ ಚಳಿಯ ಪ್ರಭಾವ ಈಗ ಕಡಿಮೆಯಾಗಿದೆ.

Advertisement

ಭಾರತೀಯ ಹವಾಮಾನ ಇಲಾಖೆಯು ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದ ಕೆಲವು ಕಡೆ ಶೀತ ಗಾಳಿಯ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಮಿಂಚು  ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ದೇಶದ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ದಟ್ಟವಾದ ಮಂಜಿನ ಸ್ಥಿತಿಯಿಂದಾಗಿ, ದೇಶದ ಉತ್ತರ ಪ್ರದೇಶದಲ್ಲಿ ಹಲವಾರು ರೈಲುಗಳು ಮತ್ತು ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿತು. ದೆಹಲಿಗೆ ಹೋಗುವ ಸುಮಾರು 25 ರೈಲುಗಳು ಐದರಿಂದ ಆರು ಗಂಟೆಗಳವರೆಗೆ ವಿಳಂಬವಾಗಿವೆ. ಏತನ್ಮಧ್ಯೆ, ಮಂಜಿನಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 50 ವಿಮಾನಗಳು ವಿಳಂಬವಾಗಿವೆ. ಆದರೆ, ಯಾವುದೇ ವಿಮಾನಗಳು ರದ್ದಾಗಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |
February 8, 2025
7:44 PM
by: The Rural Mirror ಸುದ್ದಿಜಾಲ
ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು
February 8, 2025
7:57 AM
by: The Rural Mirror ಸುದ್ದಿಜಾಲ
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |
February 8, 2025
7:48 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ
February 8, 2025
7:38 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror