Advertisement
MIRROR FOCUS

ಚಳಿ ಹೇಗಿದೆ…? | ಉತ್ತರ ಭಾರತದಲ್ಲಿ ಚಳಿಯ ಪ್ರಭಾವ ಏನು..? | ರಾಜ್ಯದಲ್ಲಿ ತಗ್ಗಿದೆಯಾ ಚಳಿಯ ಪ್ರಭಾವ |

Share

ಜನವರಿ ತಿಂಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ ಎನ್ನುವ ವರದಿ ಈ ಹಿಂದೆ ಬಂದಿತ್ತು. ಇದೀಗ ರಾಜ್ಯದಲ್ಲಿ ಚಳಿಯ ಪ್ರಭಾವ ಕಡಿಮೆಯಾಗಿದೆ. ಆದರೆ ಉತ್ತರ ಭಾರತವನ್ನು ಶೀತದ ಅಲೆಯು ಆವರಿಸಿದೆ, ಬೆಳಿಗ್ಗೆ ದಟ್ಟವಾದ ಮಂಜಿನಿಂದ ಕೂಡಿರಲಿದ್ದು,  ಮುಂದಿನ 3-4 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬೆಳಿಗ್ಗೆ ಮತ್ತು ರಾತ್ರಿಯ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣವು ಬಾಧಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…..ಮುಂದೆ ಓದಿ….

ರಾಜ್ಯದ  ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಸಾಧ್ಯತೆ ಇದೆ.ಜನವರಿಯ ಆರಂಭವು ರಾಜ್ಯದಾದ್ಯಂತ ಶೀತ ಹವಾಮಾನವನ್ನು ಉಂಟುಮಾಡಿತ್ತು, ನಂತರ ಇನ್ನಷ್ಟು ಕುಸಿತದ ಸೂಚನೆ ಇತ್ತು. ಆದರೆ ಸದ್ಯ ಚಳಿಯ ಪ್ರಭಾವ ಈಗ ಕಡಿಮೆಯಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದ ಕೆಲವು ಕಡೆ ಶೀತ ಗಾಳಿಯ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಮಿಂಚು  ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ದೇಶದ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ದಟ್ಟವಾದ ಮಂಜಿನ ಸ್ಥಿತಿಯಿಂದಾಗಿ, ದೇಶದ ಉತ್ತರ ಪ್ರದೇಶದಲ್ಲಿ ಹಲವಾರು ರೈಲುಗಳು ಮತ್ತು ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿತು. ದೆಹಲಿಗೆ ಹೋಗುವ ಸುಮಾರು 25 ರೈಲುಗಳು ಐದರಿಂದ ಆರು ಗಂಟೆಗಳವರೆಗೆ ವಿಳಂಬವಾಗಿವೆ. ಏತನ್ಮಧ್ಯೆ, ಮಂಜಿನಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 50 ವಿಮಾನಗಳು ವಿಳಂಬವಾಗಿವೆ. ಆದರೆ, ಯಾವುದೇ ವಿಮಾನಗಳು ರದ್ದಾಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

3 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

4 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

14 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

18 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

18 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago