Advertisement
MIRROR FOCUS

ಚಳಿ ಹೇಗಿದೆ…? | ಉತ್ತರ ಭಾರತದಲ್ಲಿ ಚಳಿಯ ಪ್ರಭಾವ ಏನು..? | ರಾಜ್ಯದಲ್ಲಿ ತಗ್ಗಿದೆಯಾ ಚಳಿಯ ಪ್ರಭಾವ |

Share

ಜನವರಿ ತಿಂಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ ಎನ್ನುವ ವರದಿ ಈ ಹಿಂದೆ ಬಂದಿತ್ತು. ಇದೀಗ ರಾಜ್ಯದಲ್ಲಿ ಚಳಿಯ ಪ್ರಭಾವ ಕಡಿಮೆಯಾಗಿದೆ. ಆದರೆ ಉತ್ತರ ಭಾರತವನ್ನು ಶೀತದ ಅಲೆಯು ಆವರಿಸಿದೆ, ಬೆಳಿಗ್ಗೆ ದಟ್ಟವಾದ ಮಂಜಿನಿಂದ ಕೂಡಿರಲಿದ್ದು,  ಮುಂದಿನ 3-4 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬೆಳಿಗ್ಗೆ ಮತ್ತು ರಾತ್ರಿಯ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣವು ಬಾಧಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…..ಮುಂದೆ ಓದಿ….

ರಾಜ್ಯದ  ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಸಾಧ್ಯತೆ ಇದೆ.ಜನವರಿಯ ಆರಂಭವು ರಾಜ್ಯದಾದ್ಯಂತ ಶೀತ ಹವಾಮಾನವನ್ನು ಉಂಟುಮಾಡಿತ್ತು, ನಂತರ ಇನ್ನಷ್ಟು ಕುಸಿತದ ಸೂಚನೆ ಇತ್ತು. ಆದರೆ ಸದ್ಯ ಚಳಿಯ ಪ್ರಭಾವ ಈಗ ಕಡಿಮೆಯಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದ ಕೆಲವು ಕಡೆ ಶೀತ ಗಾಳಿಯ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಮಿಂಚು  ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ದೇಶದ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ದಟ್ಟವಾದ ಮಂಜಿನ ಸ್ಥಿತಿಯಿಂದಾಗಿ, ದೇಶದ ಉತ್ತರ ಪ್ರದೇಶದಲ್ಲಿ ಹಲವಾರು ರೈಲುಗಳು ಮತ್ತು ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿತು. ದೆಹಲಿಗೆ ಹೋಗುವ ಸುಮಾರು 25 ರೈಲುಗಳು ಐದರಿಂದ ಆರು ಗಂಟೆಗಳವರೆಗೆ ವಿಳಂಬವಾಗಿವೆ. ಏತನ್ಮಧ್ಯೆ, ಮಂಜಿನಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 50 ವಿಮಾನಗಳು ವಿಳಂಬವಾಗಿವೆ. ಆದರೆ, ಯಾವುದೇ ವಿಮಾನಗಳು ರದ್ದಾಗಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

10 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

16 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

16 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago