ಹವಾಮಾನ ವರದಿ | 08-01-2025 | ವಾಯುಭಾರ ಕುಸಿತದ ಲಕ್ಷಣ | ತುಂತುರು ಮಳೆ ಸಾಧ್ಯತೆ | ಈ ವರ್ಷದ ಚಳಿಗಾಲ ಅಂತ್ಯವಾಗುವ ಸಾಧ್ಯತೆ..? |

January 8, 2025
12:28 PM
ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

09.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಶ್ರೀಲಂಕಾ ಕರಾವಳಿಗೆ ಜನವರಿ 9 ರಂದು ತಲಪುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಈಗ ಬೀಸುತ್ತಿರುವ ಶೀತ ಗಾಳಿಯು ಕಡಿಮೆಯಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗುವ ಸಾಧ್ಯತೆಗಳಿವೆ. ಜನವರಿ 9 ರಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ.

ಈಗಿನಂತೆ ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಇದರೊಂದಿಗೆ ಈ ಸಾಲಿನ ಚಳಿಗಾಲವು ಅಂತ್ಯವಾಗುವ ಸಾಧ್ಯತೆಯೂ ಇದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror