ಹವಾಮಾನ ವರದಿ | 08-01-2025 | ವಾಯುಭಾರ ಕುಸಿತದ ಲಕ್ಷಣ | ತುಂತುರು ಮಳೆ ಸಾಧ್ಯತೆ | ಈ ವರ್ಷದ ಚಳಿಗಾಲ ಅಂತ್ಯವಾಗುವ ಸಾಧ್ಯತೆ..? |

January 8, 2025
12:28 PM
ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

09.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಶ್ರೀಲಂಕಾ ಕರಾವಳಿಗೆ ಜನವರಿ 9 ರಂದು ತಲಪುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಈಗ ಬೀಸುತ್ತಿರುವ ಶೀತ ಗಾಳಿಯು ಕಡಿಮೆಯಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗುವ ಸಾಧ್ಯತೆಗಳಿವೆ. ಜನವರಿ 9 ರಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ.

ಈಗಿನಂತೆ ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಇದರೊಂದಿಗೆ ಈ ಸಾಲಿನ ಚಳಿಗಾಲವು ಅಂತ್ಯವಾಗುವ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror