ಗ್ರಾಮ ಪಂಚಾಯತ್ ಮೂಲಕ ಹಲವಾರು ಯೋಜನೆಗಳು ಜಾರಿಯಾಗುತ್ತವೆ. ಆದರೆ ಅದೇ ಗ್ರಾಮದ ಜನರಿಗೆ ಸರಿಯಾದ ಮಾಹಿತಿಗಳು ವಿವಿಧ ಕಾರಣದಿಂದ ಇಂದು ಸಿಗುತ್ತಿಲ್ಲ. ಇಲ್ಲಿದೆ ಅಂತಹ ಕೆಲವು ಯೋಜನೆಗಳ ಪರಿಚಯ
• ಯುವಕರ ಮತ್ತು ನಿರುದ್ಯೋಗಿಗಳ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದೆ.
• ಹಿರಿಯ ನಾಗರಿಕ ಮತ್ತು ಅಂಗವಿಕಲರ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಹಿಂದುಳಿದ ವರ್ಗದ ಜನರಿಗೆ ಸರ್ಕಾರ ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದೆ. ವೃದ್ಧಾಪ್ಯ ಪಿಂಚಣಿ, ವಿಧವಾ ಪಿಂಚಣಿ, ಅಂಗವಿಕಲ ಪಿಂಚಣಿ, ನೀಡಲಾಗುತ್ತದೆ.
• ಮಹಿಳಾ ಸಬಲೀಕರಣ ಯೋಜನೆಗಳು: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಗ್ರಾಮ ಪಂಚಾಯತ್ ಮೂಲಕ ಸ್ವಸಹಾಯ ಸಂಘ, ಮಹಿಳಾ ಉದ್ಯಮಗಳಿಗೆ ಸಾಲ, ತರಬೇತಿ ಕಾರ್ಯಕ್ರಮಗಳು ಜಾರಿಗೊಳಿಸಲಾಗುತ್ತದೆ.
• ಕೃಷಿ ಮತ್ತು ರೈತರಿಗೆ ಯೋಜನೆಗಳು: ಬೀಜ ಮತ್ತು ಗೊಬ್ಬರ ಸಬ್ಸಿಡಿ, ಕೃಷಿ ಉಪಕರಣಗಳಿಗೆ ಸಹಾಯಧನ, ಬೆಳೆ ವಿಮೆ ಯೋಜನೆಗಳ ಮಾಹಿತಿಗಳನ್ನು ಜಾರಿಗೊಳಿಸಲಾಗಿದೆ.
• ಶಿಕ್ಷಣಕ್ಕೆ ಸಂಬಂಧಿಸಿದ ಯೋಜನೆಗಳು: ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ, ವಿದ್ಯಾರ್ಥಿವೇತನ ಮಾಹಿತಿ, ಡಿಜಿಟಲ್ ಶಿಕ್ಷಣ ಸಹಾಯ ಗಳು.
• ಆರೋಗ್ಯ ಮತ್ತು ಸ್ವಚ್ಛತೆ ಸಂಬಂಧಿತ ಯೋಜನೆಗಳು: ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ.
* ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಗಳು: ಗ್ರಾಮ ಪಂಚಾಯತ್ ಮೂಲಕ ಹಳ್ಳಿಗಳ ಒಳಗಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಮಣ್ಣಿನ ರಸ್ತೆಗಳನ್ನು ಡಾಂಬರೀಕರಣ ಮಾಡಿ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು.
•ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಗಳು: ಗ್ರಾಮೀಣ ವಸತಿ ಯೋಜನೆಗಳ ಅಡಿಯಲ್ಲಿ ಬಸವ ವಸತ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಆಶ್ರಯ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ.
•ಉದ್ಯೋಗ ಸೃಷ್ಟಿ: ರಸ್ತೆ ನಿರ್ಮಾಣ, ಕೆರೆ, ಹೊಂಡ ಅಭಿವೃದ್ದಿ, ನೀರಾವರಿ ಕಾಮಗಾರಿಗಳಲ್ಲ ಉದ್ಯೋಗ ನೀಡುವುದು.
ಈ ಯೋಜನೆಗಳಿಗೆ ಯಾವ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು..?
ಅರ್ಜಿ ಸಲ್ಲಿಸುವ ವಿಧಾನ: ಆಯಾ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಯಾವ ಯೋಜನೆಯ ಬೇಕು. ಆ ಯೋಜನೆಗೆ ಫಾರಂ ಅನ್ನು ತೆಗೆದುಕೊಂಡು ಬೇಕಾಗುವು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಸಬಹುದು.
ಬೇಕಾಗುವ ದಾಖಲೆಗಳು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ನಿವಾಸ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಬುಕ್
ಆದಾಯ ಪ್ರಮಾಣ ಪತ್ರ
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…