Advertisement
ಸುದ್ದಿಗಳು

ಗ್ರಾಮ ಪಂಚಾಯತ್ ಯೋಜನೆಗಳ ಬಗ್ಗೆ ಗೊತ್ತಾ..?

Share

ಗ್ರಾಮ ಪಂಚಾಯತ್ ಮೂಲಕ ಹಲವಾರು ಯೋಜನೆಗಳು ಜಾರಿಯಾಗುತ್ತವೆ. ಆದರೆ ಅದೇ ಗ್ರಾಮದ ಜನರಿಗೆ ಸರಿಯಾದ ಮಾಹಿತಿಗಳು ವಿವಿಧ ಕಾರಣದಿಂದ ಇಂದು ಸಿಗುತ್ತಿಲ್ಲ. ಇಲ್ಲಿದೆ ಅಂತಹ ಕೆಲವು ಯೋಜನೆಗಳ ಪರಿಚಯ

ಯುವಕರ ಮತ್ತು ನಿರುದ್ಯೋಗಿಗಳ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದೆ.
• ಹಿರಿಯ ನಾಗರಿಕ ಮತ್ತು ಅಂಗವಿಕಲರ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಹಿಂದುಳಿದ ವರ್ಗದ ಜನರಿಗೆ ಸರ್ಕಾರ ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದೆ. ವೃದ್ಧಾಪ್ಯ ಪಿಂಚಣಿ, ವಿಧವಾ ಪಿಂಚಣಿ, ಅಂಗವಿಕಲ ಪಿಂಚಣಿ, ನೀಡಲಾಗುತ್ತದೆ.
ಮಹಿಳಾ ಸಬಲೀಕರಣ ಯೋಜನೆಗಳು: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಗ್ರಾಮ ಪಂಚಾಯತ್ ಮೂಲಕ ಸ್ವಸಹಾಯ ಸಂಘ, ಮಹಿಳಾ ಉದ್ಯಮಗಳಿಗೆ ಸಾಲ, ತರಬೇತಿ ಕಾರ್ಯಕ್ರಮಗಳು ಜಾರಿಗೊಳಿಸಲಾಗುತ್ತದೆ.
ಕೃಷಿ ಮತ್ತು ರೈತರಿಗೆ ಯೋಜನೆಗಳು: ಬೀಜ ಮತ್ತು ಗೊಬ್ಬರ ಸಬ್ಸಿಡಿ, ಕೃಷಿ ಉಪಕರಣಗಳಿಗೆ ಸಹಾಯಧನ, ಬೆಳೆ ವಿಮೆ ಯೋಜನೆಗಳ ಮಾಹಿತಿಗಳನ್ನು ಜಾರಿಗೊಳಿಸಲಾಗಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಯೋಜನೆಗಳು: ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ, ವಿದ್ಯಾರ್ಥಿವೇತನ ಮಾಹಿತಿ, ಡಿಜಿಟಲ್ ಶಿಕ್ಷಣ ಸಹಾಯ ಗಳು.
ಆರೋಗ್ಯ ಮತ್ತು ಸ್ವಚ್ಛತೆ ಸಂಬಂಧಿತ ಯೋಜನೆಗಳು: ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ.
* ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಗಳು: ಗ್ರಾಮ ಪಂಚಾಯತ್ ಮೂಲಕ ಹಳ್ಳಿಗಳ ಒಳಗಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಮಣ್ಣಿನ ರಸ್ತೆಗಳನ್ನು ಡಾಂಬರೀಕರಣ ಮಾಡಿ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು.
ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಗಳು: ಗ್ರಾಮೀಣ ವಸತಿ ಯೋಜನೆಗಳ ಅಡಿಯಲ್ಲಿ ಬಸವ ವಸತ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಆಶ್ರಯ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ.
ಉದ್ಯೋಗ ಸೃಷ್ಟಿ: ರಸ್ತೆ ನಿರ್ಮಾಣ, ಕೆರೆ, ಹೊಂಡ ಅಭಿವೃದ್ದಿ, ನೀರಾವರಿ ಕಾಮಗಾರಿಗಳಲ್ಲ ಉದ್ಯೋಗ ನೀಡುವುದು.

ಈ ಯೋಜನೆಗಳಿಗೆ ಯಾವ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು..?

ಅರ್ಜಿ ಸಲ್ಲಿಸುವ ವಿಧಾನ:  ಆಯಾ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ,  ಯಾವ ಯೋಜನೆಯ ಬೇಕು. ಆ ಯೋಜನೆಗೆ ಫಾರಂ ಅನ್ನು ತೆಗೆದುಕೊಂಡು ಬೇಕಾಗುವು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಸಬಹುದು.
ಬೇಕಾಗುವ ದಾಖಲೆಗಳು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ನಿವಾಸ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಬುಕ್
ಆದಾಯ ಪ್ರಮಾಣ ಪತ್ರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

15 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago