MIRROR FOCUS

ಮಳೆ ಕೊರತೆ ಎಷ್ಟಿದೆ… ? | ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆ ಈ ವರ್ಷ… |

Share

ಈ ಬಾರಿ ಮಳೆಯ ಕೊರತೆ ಬಗ್ಗೆ ಚರ್ಚೆಯಾಗುತ್ತಿದೆ. ಕೃಷಿ ಏನಾದೀತು..?, ಗ್ರಾಮೀಣ ಜನರ ಬದುಕು ಏನಾದೀತು, ನಗರ ಕಡೆ ನೀರು ಇದ್ದೀತೇ…?, ಇನ್ನಾದರೂ ಮಳೆಯಾದೀತೇ ಎಂಬ ಚರ್ಚೆ, ಪ್ರಶ್ನೆ ಎಲ್ಲೆಡೆ ಇದೆ. ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆಯ ಲೆಕ್ಕ ಕಾಣುತ್ತಿದೆ. ಮಳೆ ಲೆಕ್ಕಗಳನ್ನು ದಾಖಲಿಸುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರು ತಮ್ಮ ಡೈರಿಯಲ್ಲಿ ದಾಖಲೆ ಮಾಡಿಕೊಂಡಿರುವ ಮಾಹಿತಿಯನ್ನು ಮಳೆ ಮಾಹಿತಿ ಲೆಕ್ಕದ ವಾಟ್ಸಪ್‌ ಗುಂಪಿನಲ್ಲಿ ನೀಡಿದ್ದಾರೆ. ಈ ಪ್ರಕಾರ ಆಗಸ್ಟ್‌ ತಿಂಗಳಲ್ಲಿ ದಾಖಲಾದ ಅತೀ ಕಡಿಮೆ ಮಳೆ ಈ ವರ್ಷ…!.

Advertisement
ಪಿಜಿಎಸ್‌ಎನ್‌ ಪ್ರಸಾದ್, ಬಾಳಿಲ

ಆಗಸ್ಟ್ ತಿಂಗಳಲ್ಲಿ ದಾಖಲಾದ ಮಳೆ 331 ಮಿ.ಮೀ.  ಆಗಸ್ಟ್ ತಿಂಗಳಲ್ಲಿ ಈ ಹಿಂದಿನ ಕನಿಷ್ಠ ಮಳೆ 1977 ರಲ್ಲಿ 551 ಮಿ.ಮೀ.ದಾಖಲಾಗಿತ್ತು. ನನ್ನಲ್ಲಿರುವ ಮಾಹಿತಿ ಪ್ರಕಾರ ಮಳೆಗಾಲದ ಜೂನ್, ಜುಲೈ, ಆಗಸ್ಟ್ ಈ ಮೂರೂ ತಿಂಗಳಲ್ಲಿ ತಿಂಗಳೊಂದರಲ್ಲಿ ದಾಖಲಾದ ಕನಿಷ್ಟ ಮಳೆಯಿದು. 1977 ರಲ್ಲಿ ಸೆಪ್ಟೆಂಬರ, ಅಕ್ಟೋಬರನಲ್ಲಿ ಸಾಮಾನ್ಯ ಮಳೆ, ನವೆಂಬರ ದಲ್ಲಿ ಗರಿಷ್ಠ 606 ಮಿ.ಮೀ.ಸುರಿದಿತ್ತು.

ಆಗಸ್ಟ್ ತಿಂಗಳ ಅಂತ್ಯಕ್ಕೆ ಬರುವ ವಾರ್ಷಿಕ ಸರಾಸರಿ ಮಳೆ (1976 – 2023) 3523 ಮಿ.ಮೀ. ಈ ವರ್ಷ 2737 ಮಿ.ಮೀ.ಅಂದರೆ ಶೇ.22.3 ರಷ್ಟು ಕೊರತೆಯಿದೆ. ಆಗಸ್ಟ್ ತಿಂಗಳ ಸರಾಸರಿ 965 ಮಿ.ಮೀ. ಹೋಲಿಸಿದರೆ ಈ ಬಾರಿ ಶೇ.65.7 ಕೊರತೆಯಿದೆ. ಆಗಸ್ಟ್ ತಿಂಗಳ ಅಂತ್ಯದವರೆಗೆ ಮಳೆ ಬರುವ ವಾಡಿಕೆ ದಿನಗಳು 109. ಈ ಬಾರಿ ಕೇವಲ 88 ದಿನ ಮಾತ್ರ ಮಳೆಯಾಗಿದೆ. ವಾರ್ಷಿಕವಾಗಿ ಮಳೆ ದಾಖಲಾಗುವ ಸರಾಸರಿ ದಿನಗಳು 165.. ಗರಿಷ್ಟ 202 (2021) ಕನಿಷ್ಟ 144 (1986 & 2017) ನನ್ನ ತಂದೆಯವರ ಡೈರಿಯಲ್ಲಿ ದಾಖಲಾದಂತೆ 1965 ರಲ್ಲಿ ಕೇವಲ 123 ದಿನಗಳಷ್ಷೇ ಮಳೆ ದಾಖಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…

19 minutes ago

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…

1 hour ago

ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ

ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…

2 hours ago

ಬೃಹಸ್ಪತಿ ಅಂದರೆ ಜ್ಞಾನವಂತ

ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…

3 hours ago

ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ…

4 hours ago

“ಲಾಭ ದೃಷ್ಟಿ ಯೋಗ” ಎಂದರೇನು…?

ಹೆಚ್ಚಿನ ಮಾಹಿತಿಗೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago