Advertisement
MIRROR FOCUS

ಮಳೆ ಕೊರತೆ ಎಷ್ಟಿದೆ… ? | ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆ ಈ ವರ್ಷ… |

Share

ಈ ಬಾರಿ ಮಳೆಯ ಕೊರತೆ ಬಗ್ಗೆ ಚರ್ಚೆಯಾಗುತ್ತಿದೆ. ಕೃಷಿ ಏನಾದೀತು..?, ಗ್ರಾಮೀಣ ಜನರ ಬದುಕು ಏನಾದೀತು, ನಗರ ಕಡೆ ನೀರು ಇದ್ದೀತೇ…?, ಇನ್ನಾದರೂ ಮಳೆಯಾದೀತೇ ಎಂಬ ಚರ್ಚೆ, ಪ್ರಶ್ನೆ ಎಲ್ಲೆಡೆ ಇದೆ. ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆಯ ಲೆಕ್ಕ ಕಾಣುತ್ತಿದೆ. ಮಳೆ ಲೆಕ್ಕಗಳನ್ನು ದಾಖಲಿಸುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರು ತಮ್ಮ ಡೈರಿಯಲ್ಲಿ ದಾಖಲೆ ಮಾಡಿಕೊಂಡಿರುವ ಮಾಹಿತಿಯನ್ನು ಮಳೆ ಮಾಹಿತಿ ಲೆಕ್ಕದ ವಾಟ್ಸಪ್‌ ಗುಂಪಿನಲ್ಲಿ ನೀಡಿದ್ದಾರೆ. ಈ ಪ್ರಕಾರ ಆಗಸ್ಟ್‌ ತಿಂಗಳಲ್ಲಿ ದಾಖಲಾದ ಅತೀ ಕಡಿಮೆ ಮಳೆ ಈ ವರ್ಷ…!.

Advertisement
ಪಿಜಿಎಸ್‌ಎನ್‌ ಪ್ರಸಾದ್, ಬಾಳಿಲ

ಆಗಸ್ಟ್ ತಿಂಗಳಲ್ಲಿ ದಾಖಲಾದ ಮಳೆ 331 ಮಿ.ಮೀ.  ಆಗಸ್ಟ್ ತಿಂಗಳಲ್ಲಿ ಈ ಹಿಂದಿನ ಕನಿಷ್ಠ ಮಳೆ 1977 ರಲ್ಲಿ 551 ಮಿ.ಮೀ.ದಾಖಲಾಗಿತ್ತು. ನನ್ನಲ್ಲಿರುವ ಮಾಹಿತಿ ಪ್ರಕಾರ ಮಳೆಗಾಲದ ಜೂನ್, ಜುಲೈ, ಆಗಸ್ಟ್ ಈ ಮೂರೂ ತಿಂಗಳಲ್ಲಿ ತಿಂಗಳೊಂದರಲ್ಲಿ ದಾಖಲಾದ ಕನಿಷ್ಟ ಮಳೆಯಿದು. 1977 ರಲ್ಲಿ ಸೆಪ್ಟೆಂಬರ, ಅಕ್ಟೋಬರನಲ್ಲಿ ಸಾಮಾನ್ಯ ಮಳೆ, ನವೆಂಬರ ದಲ್ಲಿ ಗರಿಷ್ಠ 606 ಮಿ.ಮೀ.ಸುರಿದಿತ್ತು.

ಆಗಸ್ಟ್ ತಿಂಗಳ ಅಂತ್ಯಕ್ಕೆ ಬರುವ ವಾರ್ಷಿಕ ಸರಾಸರಿ ಮಳೆ (1976 – 2023) 3523 ಮಿ.ಮೀ. ಈ ವರ್ಷ 2737 ಮಿ.ಮೀ.ಅಂದರೆ ಶೇ.22.3 ರಷ್ಟು ಕೊರತೆಯಿದೆ. ಆಗಸ್ಟ್ ತಿಂಗಳ ಸರಾಸರಿ 965 ಮಿ.ಮೀ. ಹೋಲಿಸಿದರೆ ಈ ಬಾರಿ ಶೇ.65.7 ಕೊರತೆಯಿದೆ. ಆಗಸ್ಟ್ ತಿಂಗಳ ಅಂತ್ಯದವರೆಗೆ ಮಳೆ ಬರುವ ವಾಡಿಕೆ ದಿನಗಳು 109. ಈ ಬಾರಿ ಕೇವಲ 88 ದಿನ ಮಾತ್ರ ಮಳೆಯಾಗಿದೆ. ವಾರ್ಷಿಕವಾಗಿ ಮಳೆ ದಾಖಲಾಗುವ ಸರಾಸರಿ ದಿನಗಳು 165.. ಗರಿಷ್ಟ 202 (2021) ಕನಿಷ್ಟ 144 (1986 & 2017) ನನ್ನ ತಂದೆಯವರ ಡೈರಿಯಲ್ಲಿ ದಾಖಲಾದಂತೆ 1965 ರಲ್ಲಿ ಕೇವಲ 123 ದಿನಗಳಷ್ಷೇ ಮಳೆ ದಾಖಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

4 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago