ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

May 31, 2024
2:18 PM
ಮುಂಗಾರು ಪ್ರವೇಶವಾಗುತ್ತಿದ್ದಂತೆಯೇ ಮೀನುಗಾರಿಕೆ ಸ್ಥಗಿತವಾಗುತ್ತದೆ. ಮೀನುಗಾರರು ಬಲೆ ಹೆಣೆಯುವ ಕಾರ್ಯದಲ್ಲಿ ತೊಡಗುತ್ತಾರೆ.

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement
Advertisement

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror