ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

May 31, 2024
2:18 PM
ಮುಂಗಾರು ಪ್ರವೇಶವಾಗುತ್ತಿದ್ದಂತೆಯೇ ಮೀನುಗಾರಿಕೆ ಸ್ಥಗಿತವಾಗುತ್ತದೆ. ಮೀನುಗಾರರು ಬಲೆ ಹೆಣೆಯುವ ಕಾರ್ಯದಲ್ಲಿ ತೊಡಗುತ್ತಾರೆ.

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror