ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

May 31, 2024
2:18 PM
ಮುಂಗಾರು ಪ್ರವೇಶವಾಗುತ್ತಿದ್ದಂತೆಯೇ ಮೀನುಗಾರಿಕೆ ಸ್ಥಗಿತವಾಗುತ್ತದೆ. ಮೀನುಗಾರರು ಬಲೆ ಹೆಣೆಯುವ ಕಾರ್ಯದಲ್ಲಿ ತೊಡಗುತ್ತಾರೆ.

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror