MIRROR FOCUS

ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement
Advertisement

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…

3 hours ago

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…

3 hours ago

ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…

3 hours ago

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

11 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

11 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

13 hours ago