Advertisement
MIRROR FOCUS

ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

Share

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement
Advertisement

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

Advertisement

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03.07.2024 | ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ | ಲಯ ತಪ್ಪುತ್ತಿದೆಯೇ ಮುಂಗಾರು…?

ಈಗಿನಂತೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಎರಡು ದಿನಗಳ ಕಾಲ ಮುಂದಕ್ಕೆ ಹೋಗಿ…

41 mins ago

ಸೌರ ಮಿಷನ್ ಆದಿತ್ಯ-L1ನಿಂದ ಐತಿಹಾಸಿಕ ಸಾಧನೆ | ಪ್ರಭಾವಲಯದ ಮೊದಲ ಸುತ್ತನ್ನು ಪೂರ್ಣಗೊಳಿಸಿದ ಆದಿತ್ಯ-ಎಲ್1 – ಇಸ್ರೋದಿಂದ ಮಾಹಿತಿ

ನಮ್ಮ ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO) ಚಂದ್ರಯಾನ -2ರ(Chandrayana-2) ಯಶಸ್ಸಿನ ನಂತರ ದೇಶದ ಮೊದಲ…

2 hours ago

ಮುಜಂಟಿ ಜೇನಿನ ಬಗ್ಗೆ ಒಂದಷ್ಟು ಮಾಹಿತಿ | ಶೂನ್ಯ ಬಂಡವಾಳದಲ್ಲಿ ಜೇನು ಸಾಕಾಣಿಕೆ ಸಾಧ್ಯ…!

ಮುಜಂಟಿ ಜೇನನ್ನು(stingless bee) ಮಿಸಿರಿ ಜೇನು, ಮಸರು ಜೇನು, ರಾಳ ಜೇನು, ಮೂಲಿ…

2 hours ago

ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ | ಪ್ರಜ್ಞಾಪೂರ್ವಕ ಜೀವನದ ಕಡೆಗೆ ಪ್ರಯಾಣ ಮಾಡುವ ಅನಿವಾರ್ಯ |

ಪ್ಲಾಸ್ಟಿಕ್ ಚೀಲಗಳನ್ನು ಬೇಡವೆಂದು ಹೇಳುವ ಮೂಲಕ ಮತ್ತು ಪ್ಲಾಸ್ಟಿಕ್‌ ಮುಕ್ತ ಬದುಕಿನ ಬಗ್ಗೆ…

2 hours ago

ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ | ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ | ರೈತರಿಂದ ಆಕ್ರೋಶ

ಮಂಡ್ಯದ ಬೇಬಿ ಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ…

3 hours ago