ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.
2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.
ಬಲೆ ಹೆಣೆಯುವ ಕಾರ್ಯ: ಸದ್ಯ ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.
– ಅಂತರ್ಜಾಲ ಮಾಹಿತಿ
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…