ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.
2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.
ಬಲೆ ಹೆಣೆಯುವ ಕಾರ್ಯ: ಸದ್ಯ ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.
– ಅಂತರ್ಜಾಲ ಮಾಹಿತಿ
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…