Advertisement
MIRROR FOCUS

ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

Share

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

12 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

21 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago