Advertisement
MIRROR FOCUS

ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

Share

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago