ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?

April 23, 2024
1:41 PM
ಹಿಪ್ಪಲಿ ಕಸಿ ಹಾಗೂ ಕರಿ ಮೆಣಸು ಸೊರಗು ರೋಗ ತಡೆಯ ಬಗ್ಗೆ ಮಾಹಿತಿ ಇಲ್ಲಿದೆ.

ಹಿಪ್ಪಲಿ ಕಸಿ(Pippali) ಮೆಣಸು(Black Pepper) ಬೇರಿನ ಮೂಲಕ ಬರುವ ಸೊರಗು ರೋಗ(Disease) ತಡೆಯಲು ಸಹಕಾರಿ. ಇದರ ಇಳುವರಿ ಸಾದಾ ಬಳ್ಳಿಯ(Creeper) ಇಳುವರಿಗಿಂತ ಕಡಿಮೆ. ಹಿಪ್ಪಲಿ ಕಸಿ ಬಳ್ಳಿಗಳಿಗೆ ನೀರು(Water), ಪೋಣಕಾಂಶಗಳನ್ನು(Nutrition) ಹೆಚ್ಚಾಗಿ ಕೊಡಬೇಕು. ಹಿಪ್ಪಲಿಯ ಬೇರಿನ ವ್ಯೂಹದ ವ್ಯಾಪ್ತಿ ಚಿಕ್ಕದು. ಅದಕ್ಕಾಗಿ ಹೆಚ್ಚು ನೀರು ಮತ್ತು ಗೊಬ್ಬರವನ್ನು(Manure) ಅದು ಬಯಸುತ್ತದೆ. ಜವಳು ಭೂಮಿಗೆ ಹಿಪ್ಪಲಿ ಕಸಿ ಮೆಣಸು ಸೂಕ್ತ. ನೀರಾವರಿ ಇದ್ದಲ್ಲಿ ಸಹ ಹಿಪ್ಪಲಿ ಕಸಿ ಮೆಣಸು ಒಳ್ಳೆಯದು. ಹಿಪ್ಪಲಿ ಕಸಿಯನ್ನು in vitro ವಿಧಾನದ ಮೂಲಕ ಮಾಡಿಕೊಳ್ಳುವುದು ಒಳ್ಳೆಯದು. ಹಿಪ್ಪಲಿ ಕಸಿ ಬಳ್ಳಿಗಳ ಗಾತ್ರ ಹೆಚ್ಚಿಸಲು ಒಂದು ಮರಕ್ಕೆ ಹಬ್ಬಿಸಲು ಮೂರು, ನಾಲ್ಕು ಹಿಪ್ಪಲಿ ಕಸಿ ಬಳ್ಳಿ ಹಬ್ಬಿಸಬಹುದು.

Advertisement
Advertisement

1. ಸಾದಾ ಕಾಳುಮೆಣಸಿನ ಗಿಡಕ್ಕೆ ಹಾಕಿದಂತೆ ಕಸಿ ಗಿಡಕ್ಕೂ COC ಡ್ರೆಂಚಿಂಗ್ ಬೇಕೇ? : ಬೇಕು ಅಂತ ಇಲ್ಲ.ಆದ್ರೆ ಮೇಲ್ಗಡೆ ಬಳ್ಳಿಗೆ ಬೋರ್ಡೋ,ಅಥವಾ ಬ್ಲೈಟ್ಯಾಕ್ಸ್ ಸ್ಪ್ರೇ ಕೊಡಲೇ ಬೇಕು‌

Advertisement

2. ಹೆಚ್ಚಿನ ಕವಲು ಒಡೆಯಲು ಕುಡಿ ಚಿವುಟ ಬೇಕೆ? – ಮೇಲ್ಗಡೆ ಕುಡಿ ಚಿವುಟ ಬೇಕು ಅಂತಿಲ್ಲ.ಬೆಳವಣಿಗೆ ಆಗುತ್ತಿದ್ದಂತೆ ಹೆಚ್ಚಿನ ಕುಡಿ ಬರುತ್ತದೆ

3. ತೋಟದಲ್ಲಿ ಹಿಪ್ಪಲಿ ಬೆಳೆಸಿ ಕಸಿ ಕಟ್ಟುವುದು ಕೊಟ್ಟೆ ಸಸಿ ಗಿದಕ್ಕಿಂತ ಉತ್ತಮವೇ? : ಒಬ್ಬ ಕೃಷಿಕರು ಹೇಳಿದ ಪ್ರಕಾರ ಇನ್ ಸೈಟ್ ಹಿಪ್ಪಲಿ ಕಾಂಡ ಹೆಚ್ಚು ದಪ್ಪ ಇದ್ದು ಮೆಣಸಿನ ಬಳ್ಳಿ ಗಾತ್ರಕ್ಕೆ ಹೊಂದಿಕೊಳ್ಳುತ್ತದೆ ಎನ್ನುತ್ತಾರೆ. ನಿಮ್ಮದೂ ಇದೆ ಅಭಿಪ್ರಾಯವೇ? –  ಗಾತ್ರಕ್ಕೆ ಹೊಂದಿಕೊಳ್ಳುತ್ತದೆ.ಆದ್ರೆ ಬುಡದಲ್ಲಿ ನೆಟ್ಟ ನಂತರ ಕಸಿ ಮಾಡುವುದು ಅತ್ಯುತ್ತಮ

Advertisement

4. ಅಡಿಕೆ ತೋಟದಲ್ಲಿ ಯಾವ ಜಾತಿ sion ಒಳ್ಳೆಯದು?:-  ಹೆಚ್ಚು ಬಿಸಿಲು ಇದ್ದಲ್ಲಿ ಪನಿಯೂರು ಜಾತಿ,ಹಳೆ ತೋಟದಲ್ಲಿ ಇತರೆ ತಳಿಗಳು ಉತ್ತಮ

5. ಒಂದು ಅಡಿಕೆ/ಹಿಪ್ಪಲಿ ಬುಡಕ್ಕೆ ಎಷ್ಟು ಕಸಿ ಮಾಡಬೇಕು? : 2 ಬಳ್ಳಿ ಗೆ ಕಸಿ ಮಾಡುವುದು ಉತ್ತಮ

Advertisement

6. ಒಂದಕ್ಕಿಂತ ಹೆಚ್ಚು ಹಿಪ್ಪಲಿ ಗಿಡ ಒಂದು ಅಡಿಕೆಗೆ ಹಾಕಬೇಕೆ? : ಇಲ್ಲ.ಒಂದು ಮೊದಲು ನೆಟ್ಟು ಕಸಿಮಾಡಿ,ನಂತರ ಬಂದ ಒಂದು ಚಿಗುರಿಗೆ ಕಸಿ ಮಾಡಿದರೆ ಆಯ್ತು

7. ಮಣ್ಣಿಗೆ ಹತ್ತಿರದಲ್ಲಿ ಕಸಿ ಇದ್ದು ಮೆಣಸಿಗೂ ಬೇರು ಬಂದರೆ ಹೆಚ್ಚು ಉತ್ತಮ ಅಂತ ಒಬ್ಬ ಕೃಷಿಕರ ಅಭಿಪ್ರಾಯ. ಇದರಿಂದ ಬೇರಿಗೆ ರೋಗ ಬರುವುದಿಲ್ಲವೇ? :  ಗಿಡ ಚೆನ್ನಾಗಿ ಬೆಳೆಯುತ್ತದೆ.ಆದ್ರೆ ಮಣ್ಣಿನಿಂದ ರೋಗ ಬರುತ್ತದೆ.ಪುನಃ coc ಹಾಕಬೇಕು

Advertisement

8. ಹಿಪ್ಪಲಿ ಗಿಡ ಅಡಿಕೆಗೆ ತೊಂದರೆ ಕೊಡುತ್ತದೆಯೇ? :  ಹಿಪ್ಪಲಿ ಹೆಚ್ಚು ಬೇರು ಬರುವುದರಿಂದ ಗೊಬ್ಬರ ಹಾಕಲು ಉಳಿದ ಕೆಲಸ ಗಳಿಗೆ ಸ್ವಲ್ಪ ತೊಂದರೆ.

9. ಸಾದಾ ಮೆಣಸಿಗಿಂತ ಹಿಪ್ಪಲಿ ಕಸಿ ಗಿಡಕ್ಕೆ ಹೆಚ್ಚು ನೀರು ಬೇಕೆ? : ನೀರು ಬೇಕು.ಜಾಸ್ತಿ ಅಂತ ಅಲ್ಲ.ಕಡಿಮೆ ನೀರು ಇದ್ದಲ್ಲಿ ಬೆಳವಣಿಗೆ ಕಡಿಮೆ ಇರುತ್ತದೆ.ಆದ್ರೆ ಬೆಳೆ ಚೆನ್ನಾಗಿ ಇರುತ್ತದೆ.

Advertisement

10. ಹೆಚ್ಚು ಗೊಬ್ಬರ ಬೇಕೆ? : ಗೊಬ್ಬರ ವೂ ಅಷ್ಟೇ .ಹೆಚ್ಚು ಬೇಕಾಗುತ್ತದೆ.ವಿಪರೀತ ಬೇರು ಇರುವುದರಿಂದ ಜಾಸ್ತಿ ಬೇಕು.ಆದ್ರೆ ನಾನಂತೂ ಜಾಸ್ತಿ ಕೊಟ್ಟಿಲ್ಲ.ಇದರಿಂದ ಅಡಿಕೆಗೆ ಸ್ವಲ್ಪ ಕಡಿಮೆ ಆಗಬಹುದು 1

11. ವರ್ಷಕ್ಕೆ ಸರಾಸರಿ ಎಸ್ತ್ಟು ಬಾರಿ ಹಿಪ್ಪಲಿ ಕವಲುಗಳನ್ನ ಕತ್ತರಿಸಬೇಕು? : 5ಕ್ಕಿಂತ ಹೆಚ್ಚು ಬಾರಿ ಆಗಬಹುದು. ಗೊಬ್ಬರ ನೀರು ಜಾಸ್ತಿ ಆದಂತೆ ಚಿಗಿರೂ ಜಾಸ್ತಿ.

Advertisement

12. ಒಳ್ಳೆ ಮೆಂಟೇನೆನ್ಸ್ ಇದ್ದಲ್ಲಿ 5 ವರ್ಷದ ಕಸಿ ಬಳ್ಳಿಯಲ್ಲಿ ಸರಾಸರಿ ಎಷ್ಟು ಒಣ ಕಾಳು ಮೆಣಸು ಪಡೆಯಬಹುದು? : ಸರಾಸರಿ ತಳಿಯ ಮೇಲೆ 2ಕೆಜಿ ಇರಬಹುದು

13. ನಿಮ್ಮಲ್ಲಿರುವ ಕಸಿ ಗಿಡ ಸರಾಸರಿ ಎಷ್ಟು ವರ್ಷ? : ನನ್ನ ಕಸಿ ಗಿಡ 6 ವರ್ಷ ಸಾವಿರಾರು ಮಾಡಿದ್ದರಲ್ಲಿ ಕೆಲವೇ ಉಳಿದಿವೆ. ಶೀಘ್ರ ಸೋರಾಗುರೋಗಕ್ಕೆ ಬಹಳಷ್ಟು ಸತ್ತಿವೆ.

Advertisement

14. ನಿಮ್ಮ ಸರಾಸರಿ ಯೇಲ್ಡ್ ಏಷ್ಟು? :  ಸುಮಾರು 2ಕೆಜಿ

15. ಕಸಿ ಬಳ್ಳಿಗೆ ಸಾದಾ ಬಳ್ಳಿಗಿಂತ ಹೆಚ್ಚಿನ ಬಾರಿ ಫೋಲಿಯಾರ್ ಸ್ಪ್ರೇ ಮೂಲಕ ಗೊಬ್ಬರ, ಮೈಕ್ರೋ ನುಟ್ರಿಯೆಂಟ್ ಕೊಡಬೇಕೇ? : ನಾನು ಯಾವುದೂ ಕೊಡುವುದಿಲ್ಲ.

Advertisement
  • ಅನುಭವಿ ಕೃಷಿಕರೊಬ್ಬರ ಮಾಹಿತಿ
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror