ಸುದ್ದಿಗಳು

ಬೆಳೆಗೆ ಮಣ್ಣು ಎಷ್ಟು ಪೂರಕ | ಬೇಸಾಯ ಮಾಡುವ ರೈತರಿಗೊಂದು ಅತೀ ಸಹಜ ಪಾಠ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಲ್ಲಪ್ಪ ವಾಯ್ ಕಟ್ಟಿ ಅವರು ಮಣ್ಣಿನ ರಚನೆ ಬಗ್ಗೆ ಬಹಳ ಸೊಗಸಾಗಿ ವಿವರಣೆ ನೀಡಿದ್ದಾರೆ. ಓದಿ ನೋಡಿ…..

Advertisement
Advertisement

ಯಾವುದೇ ಬೆಳೆ ಬೆಳೆಯ ಬೇಕಾದರೆ ಆಯಾ ಬೆಳೆಯ ಬೆಳವಣಿಗೆಗೆ ತಕ್ಕಂತೆ ಮಣ್ಣಿನ ರಚನೆ ಹೊಂದಿರಬೇಕು. ಸ್ವಲ್ಪ ಮಟ್ಟಿನ ಕ್ಷಾರವನ್ನೂ ಬಳಸಿ ಸಹಜವಾಗಿ ಬೆಳೆಯಬಲ್ಲ ಸಸ್ಯ ಪ್ರಬೇಧಗಳು ನಮ್ಮಲ್ಲಿ ಸಾಕಷ್ಟಿವೆ.

ನಮ್ಮ ಉತ್ತರ ಕರ್ನಾಟಕದ ಲಕ್ಷಾಂತರ ಎಕರೆ ಕಬ್ಬು ಬೇಸಾಯ ಪ್ರದೇಶಗಳಲ್ಲಿ ಎರಡು ಮೂರು ವರ್ಷ ಭೂಮಿಗೆ ವಿಶ್ರಾಂತಿ ಇಲ್ಲದೇ ಅತಿಯಾದ ನೀರಾವರಿಯಿಂದ, ಆಳ ಕೊಳವೆ ಭಾವಿಗಳ ನೀರಿನ ಬಳಕೆಯಿಂದ, ರಾಸಾಯನಿಕ ತ್ಯಾಜ್ಯ ಮಿಶ್ರಿತ ಮತ್ತು ಬೇಸಿಗೆಯಲ್ಲಿ ಹರಿಯದೇ ನಿಂತ ನದಿ ನೀರು, ಸಾವಯವ ಗೊಬ್ಬರ ಎಂದು ರಾಸಾಯನಿಕ ಮಿಶ್ರಿತ ಗೊಬ್ಬರ ಬಳಕೆಯಿಂದ ಮಣ್ಣಿನ ರಸಸಾರ ಕ್ಷಾರಿಯವಾಗಿದೆ. ಗೋಧಿ, ಜವೆಗೋದಿ (ಸದಕ) ಗಜ್ಜರಿ ಮುಂತಾದ ಬೆಳೆಗಳು ಈ ಕ್ಷಾರವನ್ನು ಬಳಸಿಕೊಂಡು ಹುಲುಸಾಗಿ ಬೆಳೆಯುತ್ತವೆ. ಅಲ್ಲದೆ ಸ್ವಲ್ಪ ಮಟ್ಟಿಗೆ ಭೂಮಿಯ ಕ್ಷಾರವನ್ನೂ ಕಡಿಮೆ ಮಾಡುತ್ತವೆ.

ಉತ್ತರ ಕರ್ನಾಟಕದ ಕಬ್ಬು ಬೇಸಾಯ ಪ್ರದೇಶಗಳಲ್ಲಿ ಪ್ರತಿ ವರ್ಷ ಅಂದಾಜು ನಾಲ್ಕು ಲಕ್ಷಕ್ಕೂ ಅಧಿಕ ಕೂಳೆ ಕಬ್ಬು ಕಟಾವು ಮುಂದಿನ ಬೇಸಾಯಕ್ಕೆ ಭೂಮಿಯನ್ನು ಸಿದ್ಧಗೊಳಿಸುತ್ತೇವೆ. ಡಿಸೆಂಬರ್ ವೇಳೆಗೆ ಖಾಲಿಯಾದ ಇಂತಹ ಭೂಮಿಯಲ್ಲಿ ಪ್ರಯೋಗಾತ್ಮಕವಾಗಿ DWB 303 (ಡೈರೆಕ್ಟರೇಟ ಆಫ್ ವ್ಹೀಟ& ಬಾರ್ಲಿ ಪಂಜಾಬ) ಅವರ ಗೋದಿ ತಳಿಯನ್ನು ಒಂದು ಎಕರೆಯಲ್ಲಿ ಜನವರಿ 10 ರಂದು ಬಿತ್ತನೆ ಮಾಡಿದ್ದೇನೆ.

ಎಕರೆಗೆ 38 ರಿಂದ 40 ಕ್ವಿಂಟಲ್ ಇಳುವರಿ ನೀಡಬಲ್ಲ, ಗಿಡ್ಡ ತಳಿ ಇದಾಗಿದ್ದು ಕ್ಷಾರ ಸಹಿಷ್ಣುತೆ ಹೊಂದಿದೆ. CoC 671 ಎರಡನೇ ಕೂಳೆ ಬೆಳೆ ಬೆಳೆದ ಭೂಮಿಯಲ್ಲಿ ಎಕರೆಗೆ 40 ಕೆಜಿ ಬೀಜ ಬಳಸಲಾಗಿದೆ. 95 ರಿಂದ 100 ದಿನದೊಳಗೆ ಕಟಾವಾಗಬಲ್ಲ ಅಲ್ಪಾವಧಿ ತಳಿ ಇದಾಗಿದ್ದು ಈ ತಿಂಗಳು 20 ನೇ ತಾರೀಖಿನ ಒಳಗೇ  ಕಟಾವಿಗೆ ಬರುತ್ತದೆ. ಉತ್ತಮ ಇಳುವರಿಯ ನಿರೀಕ್ಷೆಯೂ ಇದೆ. ಅದಕ್ಕಿಂತಲೂ ಹೆಚ್ಚಾಗಿ ಬಿತ್ತನೆ ಮಾಡಿದ ಈ ಜೌಗು ಪ್ರದೇಶದ pH ಹತೋಟಿಗೆ ಬರುವ ಎಲ್ಲ ಲಕ್ಷಣಗಳೂ ಇವೆ.
ಸ್ವಲ್ಪ ಮುತುವರ್ಜಿವಹಿಸಿ ಇಂತಹ ತಳಿಗಳನ್ನು ಬೇಸಾಯ ಮಾಡುವುದು ಸಹಜ ಬೇಸಾಯಕ್ಕೆ ಪೂರಕವಲ್ಲವೇ ?

Advertisement

ಮಲ್ಲಪ್ಪ ವಾಯ್ ಕಟ್ಟಿ
ರೋಹಿಣಿ ಬಯೋಟೆಕ್
ಮಹಾಲಿಂಗಪೂರ
9845553416

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

18 minutes ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

25 minutes ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

31 minutes ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

47 minutes ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

12 hours ago