Advertisement
ಸುದ್ದಿಗಳು

ಬೆಳೆಗೆ ಮಣ್ಣು ಎಷ್ಟು ಪೂರಕ | ಬೇಸಾಯ ಮಾಡುವ ರೈತರಿಗೊಂದು ಅತೀ ಸಹಜ ಪಾಠ

Share

ಮಲ್ಲಪ್ಪ ವಾಯ್ ಕಟ್ಟಿ ಅವರು ಮಣ್ಣಿನ ರಚನೆ ಬಗ್ಗೆ ಬಹಳ ಸೊಗಸಾಗಿ ವಿವರಣೆ ನೀಡಿದ್ದಾರೆ. ಓದಿ ನೋಡಿ…..

ಯಾವುದೇ ಬೆಳೆ ಬೆಳೆಯ ಬೇಕಾದರೆ ಆಯಾ ಬೆಳೆಯ ಬೆಳವಣಿಗೆಗೆ ತಕ್ಕಂತೆ ಮಣ್ಣಿನ ರಚನೆ ಹೊಂದಿರಬೇಕು. ಸ್ವಲ್ಪ ಮಟ್ಟಿನ ಕ್ಷಾರವನ್ನೂ ಬಳಸಿ ಸಹಜವಾಗಿ ಬೆಳೆಯಬಲ್ಲ ಸಸ್ಯ ಪ್ರಬೇಧಗಳು ನಮ್ಮಲ್ಲಿ ಸಾಕಷ್ಟಿವೆ.

ನಮ್ಮ ಉತ್ತರ ಕರ್ನಾಟಕದ ಲಕ್ಷಾಂತರ ಎಕರೆ ಕಬ್ಬು ಬೇಸಾಯ ಪ್ರದೇಶಗಳಲ್ಲಿ ಎರಡು ಮೂರು ವರ್ಷ ಭೂಮಿಗೆ ವಿಶ್ರಾಂತಿ ಇಲ್ಲದೇ ಅತಿಯಾದ ನೀರಾವರಿಯಿಂದ, ಆಳ ಕೊಳವೆ ಭಾವಿಗಳ ನೀರಿನ ಬಳಕೆಯಿಂದ, ರಾಸಾಯನಿಕ ತ್ಯಾಜ್ಯ ಮಿಶ್ರಿತ ಮತ್ತು ಬೇಸಿಗೆಯಲ್ಲಿ ಹರಿಯದೇ ನಿಂತ ನದಿ ನೀರು, ಸಾವಯವ ಗೊಬ್ಬರ ಎಂದು ರಾಸಾಯನಿಕ ಮಿಶ್ರಿತ ಗೊಬ್ಬರ ಬಳಕೆಯಿಂದ ಮಣ್ಣಿನ ರಸಸಾರ ಕ್ಷಾರಿಯವಾಗಿದೆ. ಗೋಧಿ, ಜವೆಗೋದಿ (ಸದಕ) ಗಜ್ಜರಿ ಮುಂತಾದ ಬೆಳೆಗಳು ಈ ಕ್ಷಾರವನ್ನು ಬಳಸಿಕೊಂಡು ಹುಲುಸಾಗಿ ಬೆಳೆಯುತ್ತವೆ. ಅಲ್ಲದೆ ಸ್ವಲ್ಪ ಮಟ್ಟಿಗೆ ಭೂಮಿಯ ಕ್ಷಾರವನ್ನೂ ಕಡಿಮೆ ಮಾಡುತ್ತವೆ.

ಉತ್ತರ ಕರ್ನಾಟಕದ ಕಬ್ಬು ಬೇಸಾಯ ಪ್ರದೇಶಗಳಲ್ಲಿ ಪ್ರತಿ ವರ್ಷ ಅಂದಾಜು ನಾಲ್ಕು ಲಕ್ಷಕ್ಕೂ ಅಧಿಕ ಕೂಳೆ ಕಬ್ಬು ಕಟಾವು ಮುಂದಿನ ಬೇಸಾಯಕ್ಕೆ ಭೂಮಿಯನ್ನು ಸಿದ್ಧಗೊಳಿಸುತ್ತೇವೆ. ಡಿಸೆಂಬರ್ ವೇಳೆಗೆ ಖಾಲಿಯಾದ ಇಂತಹ ಭೂಮಿಯಲ್ಲಿ ಪ್ರಯೋಗಾತ್ಮಕವಾಗಿ DWB 303 (ಡೈರೆಕ್ಟರೇಟ ಆಫ್ ವ್ಹೀಟ& ಬಾರ್ಲಿ ಪಂಜಾಬ) ಅವರ ಗೋದಿ ತಳಿಯನ್ನು ಒಂದು ಎಕರೆಯಲ್ಲಿ ಜನವರಿ 10 ರಂದು ಬಿತ್ತನೆ ಮಾಡಿದ್ದೇನೆ.

ಎಕರೆಗೆ 38 ರಿಂದ 40 ಕ್ವಿಂಟಲ್ ಇಳುವರಿ ನೀಡಬಲ್ಲ, ಗಿಡ್ಡ ತಳಿ ಇದಾಗಿದ್ದು ಕ್ಷಾರ ಸಹಿಷ್ಣುತೆ ಹೊಂದಿದೆ. CoC 671 ಎರಡನೇ ಕೂಳೆ ಬೆಳೆ ಬೆಳೆದ ಭೂಮಿಯಲ್ಲಿ ಎಕರೆಗೆ 40 ಕೆಜಿ ಬೀಜ ಬಳಸಲಾಗಿದೆ. 95 ರಿಂದ 100 ದಿನದೊಳಗೆ ಕಟಾವಾಗಬಲ್ಲ ಅಲ್ಪಾವಧಿ ತಳಿ ಇದಾಗಿದ್ದು ಈ ತಿಂಗಳು 20 ನೇ ತಾರೀಖಿನ ಒಳಗೇ  ಕಟಾವಿಗೆ ಬರುತ್ತದೆ. ಉತ್ತಮ ಇಳುವರಿಯ ನಿರೀಕ್ಷೆಯೂ ಇದೆ. ಅದಕ್ಕಿಂತಲೂ ಹೆಚ್ಚಾಗಿ ಬಿತ್ತನೆ ಮಾಡಿದ ಈ ಜೌಗು ಪ್ರದೇಶದ pH ಹತೋಟಿಗೆ ಬರುವ ಎಲ್ಲ ಲಕ್ಷಣಗಳೂ ಇವೆ.
ಸ್ವಲ್ಪ ಮುತುವರ್ಜಿವಹಿಸಿ ಇಂತಹ ತಳಿಗಳನ್ನು ಬೇಸಾಯ ಮಾಡುವುದು ಸಹಜ ಬೇಸಾಯಕ್ಕೆ ಪೂರಕವಲ್ಲವೇ ?

ಮಲ್ಲಪ್ಪ ವಾಯ್ ಕಟ್ಟಿ
ರೋಹಿಣಿ ಬಯೋಟೆಕ್
ಮಹಾಲಿಂಗಪೂರ
9845553416

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago