Advertisement
Opinion

#Agriculture | ತೋಟ ನಿರ್ಮಾಣ ಮಾಡುವುದು ಹೇಗೆ? | ಈ ಬಗ್ಗೆ ಸಮಾಲೋಚನೆ ಅಗತ್ಯವಿದೆಯೇ? | ಇಲ್ಲಿದೆ ಮಾಹಿತಿ..

Share

ಇತ್ತೀಚೆಗೆ ಬಹಳಷ್ಟು ಮಂದಿ ಕೃಷಿಗೆ #Agriculture ಮರಳುತ್ತಿದ್ದಾರೆ. ಆದರೆ ಕೃಷಿ ಹೇಗೆ ಮಾಡಬೇಕು..? ಯಾವ ಬೆಳೆ ಬೆಳೆಯಬೇಕು..? ಅದರ ಉಪಚಾರ ಹೇಗೆ..? ಈ ಎಲ್ಲಾ ಮಾಹಿತಿಗಳ ಕೊರತೆಯನ್ನು ಎದುರಿಸುತ್ತಿರುತ್ತಾರೆ. ಹಾಗಾಗಿ ಬಹಳಷ್ಟು ಮಂದಿ ಕೃಷಿಯತ್ತ ಬರಲು ಹೆದರುತ್ತಾರೆ. ಅಂಥವರಿಗಾಗಿ ಕೃಷಿಕರು ಮತ್ತು ಕೃಷಿ ಸಲಹೆಗಾರರಾದ ಪ್ರಶಾಂತ್ ಜಯರಾಮ್ ಅವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಅವರು ಈ ಬಗ್ಗೆ ಏನು ಹೇಳುತ್ತಾರೆ ಅನ್ನೋದನ್ನು ನೀವೆ ಓದಿ….

ನಮ್ಮ ಕೃಷಿ ಪಯಣದಲ್ಲಿ ಸಾಕಷ್ಟು ಅನುಭವಿ ಸಾವಯವ/ನೈಸರ್ಗಿಕ/ಸಹಜ ಕೃಷಿಕರು ಮತ್ತು ನುರಿತ ತಜ್ಞರ ಜೊತೆಗೆ ಒಡನಾಟ ಮತ್ತು ಅವರ ಕೃಷಿ ಜಮೀನುಗಳಿಗೆ ಭೇಟಿ ಮತ್ತು ನಮ್ಮ ಕೃಷಿ ಕುಟುಂಬದ ಹಿನ್ನಲೆ, ಸ್ವಂತ ಕೃಷಿ ಭೂಮಿಯಲ್ಲಿನ ದುಡಿಮೆಯಿಂದ ಒಂದಷ್ಟು ಕೃಷಿ ಅನುಭವಗಳನ್ನು ಮತ್ತು ತೋಟ ಕಟ್ಟುವ ಜ್ಞಾನವನ್ನು ಪಡೆಯಲು ನಮಗೆ ಸಹಾಯ ಮಾಡಿದೆ. ನಾವು ನಿಮ್ಮೊಂದಿಗೆ ತೋಟ ನಿರ್ಮಾಣ ಮಾಡುವ ವಿಚಾರದಲ್ಲಿ ಸಮಾಲೋಚಿಸಲು ಬಯಸುತ್ತೇವೆ ಮತ್ತು ನಿಮ್ಮ ಕಲ್ಪನೆಯ ಪ್ರಕಾರ ನಿಮ್ಮ ತೋಟದ ವಿನ್ಯಾಸ ರಚನೆ #Garden ayout ಮಾಡಲು ಸಹಾಯ ಮಾಡುತ್ತೇವೆ.

ಸಮಾಲೋಚನೆಯಲ್ಲಿ, ನಾವು ನೈಸರ್ಗಿಕ ಸಂಪನ್ಮೂಲಗಳಿಗೆ ಹಾನಿಯಾಗದ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಆಲೋಚನೆಗಳಿಗೆ ಆದ್ಯತೆ ನೀಡುತ್ತೇವೆ ಮತ್ತು ಆನಂದ, ಆಹಾರ, ಆರೋಗ್ಯ ಮತ್ತು ಆದಾಯವನ್ನು ಮುಖ್ಯ ಅಂಶಗಳಾಗಿ ಪರಿಗಣಿಸುತ್ತೇವೆ. ತೋಟ ಕಟ್ಟುವ ವಿಚಾರಗಳನ್ನು ಮುಕ್ತವಾಗಿ ಚರ್ಚಿಸಲು ಮತ್ತು ನಿಮ್ಮ ಭೇಟಿಯನ್ನು ಹೆಚ್ಚು ಪ್ರಯೋಜನಕಾರಿಯಾಗಿ ಮಾಡಲು, ನಾವು ನಿಮ್ಮೊಂದಿಗೆ ಹೆಚ್ಚಿನ ಸಮಯವನ್ನು ಹಂಚಿಕೊಳ್ಳಲು ಸಮಾಲೋಚನೆ ಸಮಯದಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡುತ್ತೇವೆ ಮತ್ತು ನಿಮ್ಮ ಜಮೀನು/ತೋಟಕ್ಕೆ ಭೇಟಿ ನೀಡಿ,ನಿಮ್ಮ ಜಮೀನಿನ ಮಣ್ಣಿನ ಸ್ವರೂಪ,ನೀವು ಜಮೀನಿನಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿರುವ ಸಮಯ ಮತ್ತು ಕೃಷಿ ಚಟುವಟಿಕೆ ನೆಡೆಸಲು ಇರುವ ಸಾಮರ್ಥ್ಯ,ನೀರಿನ ಮತ್ತು ಇತರೆ ನೈಸರ್ಗಿಕ ಹಾಗು ಮಾನವ ಸಂಪನ್ಮೂಲಗಳ ಲಭ್ಯತೆ,ಸಾರಿಗೆ ಮತ್ತು ಮಾರುಕಟ್ಟೆ ವ್ಯವಸ್ಥೆ,ಇತ್ಯಾದಿ ಅಂಶಗಳನ್ನು ಪರಿಶೀಲಿಸಿ,ನಿಮ್ಮ ಜಮೀನಿಗೆ ಸೂಕ್ತವಾಗುವ ವಿನ್ಯಾಸ ನಿರ್ಮಿಸಿಕೊಡಲಾಗುವುದು.

ಸಮಾಲೋಚನೆಯಲ್ಲಿ ಪ್ರಮುಖ ಕೃಷಿ ವಿಚಾರಗಳು:

1)ತೋಟಕ್ಕೆ ಬೇಕಾದ ಸೂಕ್ತ ಕೃಷಿ ಭೂಮಿ ಖರೀದಿಯಲ್ಲಿ ಅನುಸರಿಸಬೇಕಾದ ಪ್ರಮುಖ ಅಂಶಗಳು.
2)ಬೇಲಿ ನಿರ್ಮಾಣ.
3)ನೀರಾವರಿ ವಿನ್ಯಾಸ(ಹನಿ ಅಥವಾ ತುಂತುರು ನೀರಾವರಿ).
4)ಫಾರ್ಮ್ ಹೌಸ್, ಹಸು/ಕೋಳಿ/ಕುರಿ ಶೆಡ್, ಸಂಗ್ರಹ ಕೊಠಡಿ ನಿರ್ಮಾಣ.
5) ಮಣ್ಣಿನ ಸಂರಕ್ಷಣೆ ಮತ್ತು ಸುಧಾರಣೆ ಕ್ರಮಗಳು.
6)ಕೃಷಿ ಉಪಕರಣ ಮತ್ತು ಕೃಷಿ ಉತ್ಪನ್ನಗಳ ಸಾಗಾಟ ಸುಲುಭಗಳಿಸಲು ರಸ್ತೆ ನಿರ್ಮಾಣ.
7)ಸಾವಯವ ಗೊಬ್ಬರ ತಯಾರಿಕೆ.
8) ವಿವಿಧ ಮರಗಿಡಗಳು/ ಬೆಳೆಗಳ ಆಯೋಜನೆ ವಿನ್ಯಾಸ. (ಆಹಾರ/ಆರ್ಥಿಕ/ಮೇವು/ಗೊಬ್ಬರ/ಕಟ್ಟಿಗೆ ಬೆಳೆಗಳು)
9) ತೋಟದ ನಿರ್ವಹಣೆಯನ್ನು ಸುಗಮಗೊಳಿಸಲು ಮತ್ತು ಉತ್ಪಾದಕತೆ ಹೆಚ್ಚಿಸುವ ಮಾರ್ಗೋಪಾಯಗಳು.
10) ಮಾರುಕಟ್ಟೆ ಮತ್ತು ಮೌಲ್ಯವರ್ಧನೆಯ ಅವಕಾಶಗಳು ಮತ್ತು ಸವಾಲುಗಳು.
11)ಮನೆ ಬೇಸಾಯ:ಕುಟುಂಬದ ಬಳಕೆಗೆ ಬೇಕಾಗುವ ಧಾನ್ಯ/ಬೇಳೆಕಾಳು/ಎಣ್ಣೆಕಾಳು /ಸಾಂಬಾರ್ ಪದಾರ್ಥ ತರಕಾರಿ/ಸೊಪ್ಪು /ಹಣ್ಣು ಬೆಳೆದುಕೊಳ್ಳುವುದು.
12) ಕೃಷಿ ಪ್ರವಾಸೋದ್ಯಮದ ಅವಕಾಶಗಳು ಹಾಗು ನೀವು ತೋಟ ನಿರ್ಮಿಸಲು ಬಯಸುವ ಇತ್ಯಾದಿ ವಿಚಾರಗಳು.

ತೋಟ ನಿರ್ಮಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಮಾಲೋಚನೆ ಮತ್ತು ತೋಟದ ವಿನ್ಯಾಸ ಅಗತ್ಯವಿರುವ ಪರಿಸರ ಸ್ನೇಹಿ ಕೃಷಿಯಲ್ಲಿ ಆಸಕ್ತಿಯುಳ್ಳವರು,ಹೊಸ ತೋಟವನ್ನು ನಿರ್ಮಿಸುವ ಕನಸು ಹೊಂದಿರುವವರು, ಈಗಾಗಲೇ ಕೃಷಿಯಲ್ಲಿ ತೊಡಗಿರುವವರು ಸಮಾಲೋಚನೆಯ ಸಮಯ ನಿಗದಿಪಡಿಸಿಕೊಳ್ಳಲು ಸಂಪರ್ಕಿಸಬಹುದು.

  • ಪ್ರಶಾಂತ್ ಜಯರಾಮ್, ಕೃಷಿಕರು ಮತ್ತು ಕೃಷಿ ಸಲಹೆಗಾರರು, ಮೊ. 9342434530
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

4 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

5 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

18 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

19 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

19 hours ago