#Rakshabandhan | ರಕ್ಷಾಬಂಧನ | ಈ ದಿನವನ್ನು ಹೇಗೆ ಆಚರಣೆ ಮಾಡಬಹುದು…? |

August 29, 2023
8:25 PM
ರಕ್ಷಾಬಂಧನ ಆಚರಣೆಗೆ ನಾಡು ಸಿದ್ಧವಾಗಿದೆ. ಈ ಆಚರಣೆ ಹೇಗೆ ಮಾಡಬಹುದು ಎಂಬುದರ ಬಗ್ಗೆ ಸನಾತನ ಸಂಸ್ಥೆಯ ಬರಹದ ಯಥಾವತ್ತಾದ ರೂಪ ಇಲ್ಲಿದೆ.

ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. 2023 ರಲ್ಲಿ ರಕ್ಷಾಬಂಧನವನ್ನು ಬುಧವಾರ, ಆಗಸ್ಟ್ 30 ರಂದು ಆಚರಿಸಲಾಗುವುದು. ಈ ದಿನ ಸಹೋದರಿಯರು ತಮ್ಮ ಸಹೋದರರ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ.

Advertisement

ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ರಕ್ಷಾಬಂಧನದಿಂದ ಸಹೋದರ-ಸಹೋದರಿಯರ ನಡುವೆ ಪ್ರೀತಿ ಹೆಚ್ಚಾಗುವುದರೊಂದಿಗೆ ಅವರ ನಡುವೆ ಇರುವ ಕೊಡ-ಕೊಳ್ಳುವ ಲೆಕ್ಕಾಚಾರ ಕಡಿಮೆಯಾಗುತ್ತದೆ. ಈ ಹಬ್ಬವು ಇಬ್ಬರಿಗೂ ಈಶ್ವರನತ್ತ ಪ್ರಯಾಣಿಸುವ ಅವಕಾಶ ಒದಗಿಸುತ್ತದೆ.

ರಕ್ಷಾಬಂಧನ ಹಬ್ಬದಂದು ಇವನ್ನು ಮಾಡಿ: ಸಹೋದರನು ಸಹೋದರಿಯ ಮನೆಗೆ ಹೋಗಬೇಕು. ಸಹೋದರಿಯು ಸಹೋದರನ ಆರತಿ ಬೆಳಗಿ, ನಿರಪೇಕ್ಷವಾಗಿ ರಾಖಿ ಕಟ್ಟಬೇಕು ಸಹೋದರಿಯು ಸಹೋದರನಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಬೇಕು. ಈ ದಿನವು ಸಹೋದರ-ಸಹೋದರಿಯರ ನಡುವಿನ ಕೊಡ-ಕೊಳ್ಳುವಿಕೆಯ ಲೆಕ್ಕಾಚಾರ ಕಡಿಮೆ ಮಾಡಲು ಪೂರಕವಾಗಿರುತ್ತದೆ. ಸಹೋದರಿಯು ನಿಸ್ವಾರ್ಥವಾಗಿ ರಾಖಿಯನ್ನು ಕಟ್ಟಿದರೆ ಈ ಲೆಕ್ಕಾಚಾರ ಇನ್ನಷ್ಟು ವೇಗವಾಗಿ ಕಡಿಮೆಯಾಗುತ್ತದೆ.

ಸಹೋದರನು ಸಹೋದರಿಗೆ ಸಾತ್ತ್ವಿಕ ಉಡುಗೊರೆಯನ್ನು ನೀಡಬೇಕು ರಕ್ಷಾಬಂಧನದಂದು ರಾಖಿ ಕಟ್ಟಿಸಿಕೊಂಡು ಸಹೋದರನು ಸಹೋದರಿಗೆ ಏನಾದರೂ ಉಡುಗೊರೆ ನೀಡುತ್ತಾನೆ. ಇದರಿಂದ ಇಬ್ಬರಿಗೂ ಪರಸ್ಪರರ ನೆನಪಾಗುತ್ತದೆ. ಸಹೋದರಿಯ ಪ್ರೀತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ಆದರೆ ಪ್ರೀತಿಯ ಸಂಕೇತವೆಂದು ಉಡುಗೊರೆ ನೀಡಿ ಸ್ವಲ್ಪ ಮಟ್ಟಿಗೆ ಸಹೋದರಿಗೆ ಆನಂದ ನೀಡಬಹುದು. ಉಡುಗೊರೆ ಕೊಡುವಾಗ, ಸಹೋದರನ ಮನಸ್ಸಿನಲ್ಲಿರುವ ಈಶ್ವರನ ಬಗ್ಗೆ ಇರುವ ಭಾವವು ಸಹೋದರಿಯ ಮೇಲೆಯೂ ಪರಿಣಾಮ ಬೀರುತ್ತದೆ. ಆದುದರಿಂದ ಸಹೋದರಿಯು ಉಡುಗೊರೆಯನ್ನು ಕೇಳಿ ಪಡೆದುಕೊಳ್ಳದೆ, ಸಹೋದರನು ಸ್ವೇಚ್ಛೆಯಿಂದ ನೀಡಿರುವುದನ್ನು ಸ್ವೀಕರಿಸಿದರೆ ಒಳ್ಳೆಯದಾಗುತ್ತದೆ. ಸಾತ್ತ್ವಿಕ ವಸ್ತುಗಳಿಂದ ಜೀವದ ಮೇಲೆ ವ್ಯಾವಹಾರಿಕ ಪರಿಣಾಮವಾಗುವುದಿಲ್ಲ. ಸಾತ್ತ್ವಿಕ ವಸ್ತುಗಳು ಕೊಡುವ ಜೀವಕ್ಕೆ 20% ಮತ್ತು ಸ್ವೀಕರಿಸುವ ಜೀವಕ್ಕೆ 18% ಲಾಭವಾಗುತ್ತದೆ. ಸಾತ್ತ್ವಿಕ ಕೃತಿಗಳಿಂದ ಕೊಡ-ಕೊಳ್ಳುವ ಲೆಕ್ಕ ಕಡಿಮೆಯಾಗಿ, ಹೊಸ ಲೆಕ್ಕಾಚಾರ ನಿರ್ಮಾಣವಾಗುವುದಿಲ್ಲ.

ಪ್ರಾರ್ಥನೆ ಮಾಡಿ:

ಏನ ಬದ್ಧೋ ಬಲೀ ರಾಜಾ ದಾನವೇಂದ್ರೋ ಮಹಾಬಲಃ|
ತೇನ ತ್ವಾಮಪಿ ಬಧ್ನಾಮಿ ರಕ್ಷೇ ಮಾ ಚಲ ಮಾ ಚಲ||

ಅರ್ಥ : ಮಹಾಬಲಿ ಮತ್ತು ದಾನವೇಂದ್ರನಾದ ಬಲಿರಾಜನು ಯಾವುದರಿಂದ ಬದ್ಧನಾದನೋ, ಆ ರಾಖಿಯಿಂದ ನಾನು ನಿನ್ನನ್ನೂ ಕಟ್ಟುತ್ತೇನೆ. ಎಲೈ ರಾಖಿಯೇ, ನೀನು ವಿಚಲಿತಳಾಗಬೇಡ. ಸಹೋದರಿಯು ಸಹೋದರನ ಕಲ್ಯಾಣಕ್ಕಾಗಿ ಮತ್ತು ಸಹೋದರನು ಸಹೋದರಿಯ ರಕ್ಷಣೆಗಾಗಿ ಪ್ರಾರ್ಥನೆಯನ್ನು ಮಾಡುವುದರೊಂದಿಗೆ ಇಬ್ಬರೂ ‘ರಾಷ್ಟ್ರ ಮತ್ತು ಧರ್ಮರಕ್ಷಣೆಗಾಗಿ ನಮ್ಮಿಂದ ಪ್ರಯತ್ನವಾಗಲಿ’, ಎಂದು ಈಶ್ವರನಲ್ಲಿ ಪ್ರಾರ್ಥನೆಯನ್ನು ಮಾಡಬೇಕು.

ರಕ್ಷಾಬಂಧನ ಹಬ್ಬದಂದು ಇವನ್ನು ಮಾಡಬೇಡಿ:

1. ಸಹೋದರನಿಗೆ ಅಸಾತ್ತ್ವಿಕ ಅಥವಾ ದೇವತೆಗಳ ಚಿತ್ರವಿರುವ ರಾಖಿ ಕಟ್ಟಬೇಡಿ
2. ಸಹೋದರಿಯು ‘ತನಗೆ ಇದು ಬೇಕು, ಅದು ಕೊಡಿಸಬೇಕು’ ಎಂಬ ಅಪೇಕ್ಷೆ ಇಟ್ಟುಕೊಳ್ಳಬಾರದು.
3. ಅಶುಭ ಅಥವಾ ಭದ್ರಾಕಾಲದಲ್ಲಿ ರಾಖಿ ಕಟ್ಟಬೇಡಿ.

ಇತರ ಕೃತಿಗಳು:

ರಾಖಿಯನ್ನು ಕಟ್ಟಿಸಿಕೊಳ್ಳುವಾಗ ಸಹೋದರನು ಕುಳಿತುಕೊಳ್ಳುವ ಮಣೆಯ ಸುತ್ತಲೂ ಸಾತ್ವಿಕ ರಂಗೋಲಿಯನ್ನು ಬಿಡಿಸಬೇಕು. ಸಾತ್ವಿಕ ರಂಗೋಲಿಯಿಂದ ಸಾತ್ವಿಕ ಸ್ಪಂದನಗಳು ಪ್ರಕ್ಷೇಪಿತವಾಗುತ್ತವೆ. ಅದರಿಂದ ವಾತಾವರಣವು ಸಾತ್ವಿಕವಾಗುತ್ತದೆ.

ರಾಖಿಯನ್ನು ಕಟ್ಟಿದ ನಂತರ ಸಹೋದರನಿಗೆ ತುಪ್ಪದ ನೀಲಾಂಜನದಿಂದ ಆರತಿಯನ್ನು ಬೆಳಗಿಸುತ್ತಾರೆ. ತುಪ್ಪದ ದೀಪವು ಶಾಂತರೀತಿಯಲ್ಲಿ ಉರಿಯುತ್ತದೆ. ಅದರಿಂದ ಸಹೋದರನಲ್ಲಿ ಶಾಂತ ರೀತಿಯಲ್ಲಿ ವಿಚಾರ ಮಾಡುವ ಬುದ್ಧಿಯು ವೃದ್ಧಿಯಾಗುವಲ್ಲಿ ಸಹಾಯವಾಗುತ್ತದೆ.

ಆರತಿಯ ತಟ್ಟೆಯಲ್ಲಿ ದುಡ್ಡು ಅಥವಾ ಇತರ ಬೆಲೆಬಾಳುವ ವಸ್ತುಗಳನ್ನು ಇಡಬಾರದು. ಇಂತಹ ವಸ್ತುಗಳನ್ನು ಇಟ್ಟರೆ ಸಹೋದರಿಯ ಮನಸ್ಸಿನಲ್ಲಿ ಆ ದಿಕ್ಕಿನಲ್ಲಿ ಅಪೇಕ್ಷೆ ನಿರ್ಮಾಣವಾಗಿ ಅದೇ ಸಂಸ್ಕಾರ ಪ್ರಬಲವಾಗುತ್ತದೆ. ಇದರಿಂದ ಅವಳಲ್ಲಿ ರಜ ತಮ ಸಂಸ್ಕಾರಗಳ ಪ್ರಮಾಣ ಹೆಚ್ಚಾಗಿ ಅವಳಲ್ಲಿರುವ ಪ್ರೇಮವು ಕಡಿಮೆ ಆಗಿ ಸಹೋದರನ ಜೊತೆ ಕಲಹ ನಿರ್ಮಾಣವಾಗುತ್ತದೆ.

ಇತಿಹಾಸದ ಪುಟಗಳಲ್ಲಿ ರಕ್ಷಾಬಂಧನ:

1. ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.

2. ಇಂದ್ರ ಮತ್ತು ದೈತ್ಯರ ನಡುವೆ 12 ವರ್ಷಗಳಿಂದ ಘೋರ ಯುದ್ಧ ನಡೆದಿತ್ತು. ದೈತ್ಯರು ಗೆಲ್ಲುತ್ತಿದ್ದರು, ಇಂದ್ರನ ಶಕ್ತಿ ಕುಸಿಯುತ್ತಿತ್ತು. ಇಂದ್ರನು ಯುದ್ಧದಿಂದ ಹಿಂದೆ ಸರಿದು ತನ್ನ ಜೀವ ಉಳಿಸಿಕೊಳ್ಳುವ ವಿಚಾರ ಮಾಡುತ್ತಿದ್ದನು. ಇದನ್ನು ನೋಡಿದ ಇಂದ್ರಾಣಿಯು ಗುರು ಬೃಹಸ್ಪತಿಗೆ ಶರಣಾದಳು. ಗುರುಗಳು ಇಂದ್ರಾಣಿಯನ್ನು ಉದ್ದೇಶಿಸಿ, “ನೀನು ನಿನ್ನ ಪಾತಿವ್ರತ್ಯದ ಬಲದ ಮೇಲೆ ಇಂದ್ರನು ವಿಜಯಿಯಾಗಿ ಸುರಕ್ಷಿತನಾಗಿ ಬರಲಿ ಎಂಬ ಸಂಕಲ್ಪ ಮಾಡಿ, ಇಂದ್ರನ ಬಲಗೈಯ ಮಣಿಕಟ್ಟಿಗೆ ಒಂದು ದಾರ ಕಟ್ಟಿದರೆ ಇಂದ್ರನು ಈ ಯುದ್ಧವನ್ನು ಖಂಡಿತವಾಗಿಯೂ ಗೆಲ್ಲುವನು” ಎಂದು ಹೇಳಿದರು. ಇಂದ್ರಣಿಯು ಇದೇ ರೀತಿ ಮಾಡಿದಳು ಮತ್ತು ಇಂದ್ರನು ದೈತ್ಯರ ಮೇಲೆ ಜಯ ಸಾಧಿಸಿದನು.ಇಂದ್ರಾಣಿಯು ಆ ದಾರವನ್ನು ಕಟ್ಟುವಾಗ ಮಾಡಿದ ಪ್ರಾರ್ಥನೆ ಮುಂದಿನಂತಿದೆ.

ಏನ ಬದ್ಧೋ ಬಲೀ ರಾಜಾ ದಾನವೇಂದ್ರೋ ಮಹಾಬಲಃ|
ತೇನ ತ್ವಾಮಪಿ ಬಧ್ನಾಮಿ ರಕ್ಷೇ ಮಾ ಚಲ ಮಾ ಚಲ ||

ಅರ್ಥ: ಮಹಾಬಲಿ ಮತ್ತು ದಾನವೇಂದ್ರನಾದ ಬಲಿರಾಜನು ಯಾವುದರಿಂದ ಬದ್ಧನಾದನೋ, ಆ ರಾಖಿಯಿಂದ ನಾನು ನಿನ್ನನ್ನೂ ಕಟ್ಟುತ್ತೇನೆ. ಎಲೈ ರಾಖಿಯೇ, ನೀನು ವಿಚಲಿತಳಾಗಬೇಡ.

3. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸಕಾಲದಿಂದ ಪ್ರಾರಂಭವಾಯಿತು.

4. ಪ್ರಾಚೀನ ಕಾಲದ ರಾಖಿ. ಅಕ್ಕಿ, ಬಂಗಾರ ಮತ್ತು ಬಿಳಿಸಾಸಿವೆಗಳನ್ನು ಒಂದುಗೂಡಿಸಿ ಗಂಟು ಕಟ್ಟಿದರೆ ರಕ್ಷಾ ಅರ್ಥಾತ್ ರಾಖಿಯು ತಯಾರಾಗುತ್ತದೆ. ಇದನ್ನು ರೇಶ್ಮೆಯ ದಾರದಿಂದ ಕಟ್ಟುತ್ತಿದ್ದರು.

ರಾಖಿ ಕಟ್ಟುವುದರ ಹಿಂದಿರುವ ಉದ್ದೇಶ: ಸಹೋದರ-ಸಹೋದರಿಯರ ನಡುವಿನ ಕೊಡ-ಕೊಳ್ಳುವಿಕೆಯ ಲೆಕ್ಕಾಚಾರ ಕಡಿಮೆ ಮಾಡಲು. ಸಹೋದರ-ಸಹೋದರಿಯರ ನಡುವೆ ಸಾಧಾರಣ 30% ಕೊಡ-ಕೊಳ್ಳುವಿಕೆಯ ಲೆಕ್ಕವಿರುತ್ತದೆ. ರಕ್ಷಾಬಂಧನದಂತಹ ಹಬ್ಬಗಳನ್ನು ಆಚರಿಸುವುದರಿಂದ ಅವರು ಸ್ಥೂಲ ಬಂಧನದಲ್ಲಿ ಸಿಲುಕಿದಂತೆ ಕಂಡರೂ ಸೂಕ್ಷ್ಮ ಸ್ತರದಲ್ಲಿ ಅವರ ನಡುವೆ ಇರುವ ಕೊಡ-ಕೊಳ್ಳುವ ಲೆಕ್ಕಾಚಾರ ಕಡಿಮೆಯಾಗುತ್ತದೆ.

ಆಧ್ಯಾತ್ಮಿಕ ದೃಷ್ಟಿಕೋನ : ಪುರುಷರಲ್ಲಿ ಕಾರ್ಯನಿರತ ಯಮಲಹರಿಗಳನ್ನು ನಿಯಂತ್ರಿಸಲು ರಾಖಿ ಹುಣ್ಣಿಮೆ ಅಂದರೆ ರಕ್ಷಾಬಂಧನದ ದಿನ ವಾತಾವರಣದಲ್ಲಿ ಯಮಲಹರಿಗಳ ಪ್ರಮಾಣ ಹೆಚ್ಚಿರುತ್ತದೆ. ಪುರುಷರ ದೇಹದಲ್ಲಿ ಯಮಲಹರಿಗಳ ಪ್ರವಾಹ ಪ್ರರಂಭವಾದಾಗ ಅವರ ಸೂರ್ಯನಾಡಿ ಜಾಗೃತವಾಗುತ್ತದೆ. ಈ ಜಾಗೃತ ಸೂರ್ಯನಾಡಿಯ ಆಧಾರದಿಂದ ದೇಹದಲ್ಲಿ ರಜ-ತಮದ ಪ್ರಾಬಲ್ಯ ಹೆಚ್ಚಾಗುವುದಲ್ಲದೆ, ಯಮಲಹರಿಗಳೂ ಇಡೀ ಶರೀರವನ್ನು ಪ್ರವೇಶಿಸುತ್ತವೆ. ಯಾವುದೇ ಜೀವದಲ್ಲಿ ಯಮಲಹರಿಗಳ ಪ್ರಮಾಣ ಶೇ 30 ದಾಟಿದರೆ ಆ ಜೀವಕ್ಕೆ ಕುತ್ತು ಬರುವ ಸಾಧ್ಯತೆಯಿದೆ. ಶಕ್ತಿಬೀಜದ ರೂಪವಾಗಿರುವ ಸಹೋದರಿಯು ರಾಖಿ ಕಟ್ಟುವುದರಿಂದ ಪುರುಷನಲ್ಲಿರುವ ಶಿವ-ತತ್ತ್ವ ಜಾಗೃತವಾಗುತ್ತದೆ. ಇದರಿಂದ ಅವನ ಸುಷುಮ್ನನಾಡಿಯ ಸ್ವಲ್ಪ ಅಂಶ ಜಾಗೃತವಾಗುತ್ತದೆ. ಆದುದರಿಂದ ರಾಖಿಯ ಬಂಧನ ಹಾಕುವುದರಿಂದ ಪ್ರವಾಹಿಸುವ ಯಮಲಹರಿಗಳಿಗೆ ಮತ್ತು ಅವುಗಳಿಗೆ ಕಾರ್ಯ ಮಾಡಲು ಸಹಾಯ ಮಾಡುವ ಸೂರ್ಯನಾಡಿಗೆ ಶಾಂತಗೊಳಸಿಬಹುದು.

ಭಾವನಾತ್ಮಕ ದೃಷ್ಟಿಕೋನ : ಸಹೋದರ-ಸಹೋದರಿಯ ನಿರ್ಮಲ ಪ್ರೇಮದ ಮುಂದೆ ಕಾಮ-ಕ್ರೋಧ ಸೋಲುತ್ತವೆ. ರಕ್ಷಾಬಂಧನವು ವಿಕಾರಗಳಿಗೆ (ಕಾಮ-ಕ್ರೋಧಾದಿ ಷಡ್ರಿಪುಗಳಿಗೆ) ಬಲಿಯಾಗುವ ಯುವಕ-ಯುವತಿಯರಿಗೆ ಒಂದು ವ್ರತವಿದ್ದಂತೆ. ಸಹೋದರಿಯು ಸಹೋದರನಿಗೆ ರಾಖಿಯನ್ನು ಕಟ್ಟುವುದಕ್ಕಿಂತ ಯಾರಾದರೊಬ್ಬ ಯುವಕನು/ಪುರುಷನು ಯಾರಾದರೊಬ್ಬ ತರುಣಿಯಿಂದ/ಸ್ತ್ರೀಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದು ಹೆಚ್ಚು ಮಹತ್ವದ್ದಾಗಿದೆ; ಇದರಿಂದ ಯುವತಿಯ ಕಡೆಗೆ/ಸ್ತ್ರೀಯರ ಕಡೆಗೆ ನೋಡುವ ವಿಶೇಷವಾಗಿ ಯುವಕರ ಮತ್ತು ಪುರುಷರ ದೃಷ್ಟಿಕೋನವು ಬದಲಾಗುತ್ತದೆ.

ಸಹೋದರ-ಸಹೋದರಿಯ ಈ ಪವಿತ್ರ ಬಂಧನವು ಯುವಕ-ಯುವತಿಯರನ್ನು ವಿಕಾರಗಳ ಕೂಪದಲ್ಲಿ ಬೀಳುವುದರಿಂದ ತಪ್ಪಿಸಲು ಸಮರ್ಥವಾಗಿದೆ. ಈ ನಿರ್ಮಲ ಪ್ರೇಮದ ಮುಂದೆ ಕಾಮ-ಕ್ರೋಧವು ಶಾಂತವಾಗುತ್ತದೆ.

ರಕ್ಷಾಬಂಧನದ ಈ ಹಬ್ಬವು ಇಬ್ಭಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. ಇದರಿಂದ ಕುಟುಂಬದಲ್ಲಿರುವ ಕಲಹ ಶಾಂತವಾಗುತ್ತದೆ. ಮನಸ್ತಾಪ ದೂರವಾಗುತ್ತದೆ ಮತ್ತು ಸಾಮೂಹಿಕ ಸಂಕಲ್ಪಶಕ್ತಿ ಕಾರ್ಯನಿರತವಾಗುತ್ತದೆ.

ಆಧಾರ ಗ್ರಂಥ : ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ

ಸಂಗ್ರಹ : ವಿನೋದ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ
April 23, 2025
3:13 PM
by: ಸಾಯಿಶೇಖರ್ ಕರಿಕಳ
ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |
April 23, 2025
11:24 AM
by: ದ ರೂರಲ್ ಮಿರರ್.ಕಾಂ
ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!
April 23, 2025
8:13 AM
by: ದ ರೂರಲ್ ಮಿರರ್.ಕಾಂ
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group