Advertisement
Opinion

#BloodPressure | ಪ್ರಾಣಕ್ಕೆ ಕುತ್ತು ತರಬಲ್ಲ ಅಧಿಕ ರಕ್ತದೊತ್ತಡ | ಆಯುರ್ವೇದ ಚಿಕಿತ್ಸೆ ಉತ್ತಮ |

Share

ನಿಮ್ಮ ಹೃದಯವು ರಕ್ತವನ್ನು ಪಂಪು ಮಾಡಲು ಹೆಚ್ಚು ಶ್ರಮಿಸಬೇಕಾದರೆ ಮತ್ತು ನಿಮ್ಮ ಅಪಧಮನಿಗಳು ಕಿರಿದಾಗುತ್ತಿದ್ದರೆ, ರಕ್ತದೊತ್ತಡ ಹೆಚ್ಚಾಗುತ್ತದೆ. ಸಾಮಾನ್ಯವಾಗಿ ರಕ್ತದೊತ್ತಡ 120/ 80 ಇರುತ್ತದೆ. ರಕ್ತದೊತ್ತಡ ಇದು ಎರಡು ಸಂಖ್ಯೆಗಳನ್ನು ಒಳಗೊಂಡಿರುತ್ತದೆ. ಅಗ್ರ ಸಂಖ್ಯೆ ನಿಮ್ಮ ಸಂಕೋಚನದ ರಕ್ತದೊತ್ತಡವಾಗಿದೆ ನಿಮ್ಮ ಹೃದಯ ಬಡಿತ ಮತ್ತು ದೇಹದಾದ್ಯಂತ ರಕ್ತವನ್ನು ತಳ್ಳಿದಾಗ ಆಗುವ ಹೆಚ್ಚಿನ ಒತ್ತಡ ಕೆಳಭಾಗವು ನಿಮ್ಮ ಡಯಸ್ಟೋಲಿಕ್ ಬಡಿತಗಳ ನಡುವೆ ನಿಮ್ಮ ಹೃದಯ ಸಡಿಲಗೊಂಡಾಗ ಆಗುವ ಕಡಿಮೆ ಒತ್ತಡ.

ಅಧಿಕ ರಕ್ತದೊತ್ತಡಕ್ಕೆ ಕಾರಣಗಳು:
* ಅಧಿಕ ತೂಕ
* ಮಾನಸಿಕ ಒತ್ತಡ
* ನಿದ್ರಾಹೀನತೆ
* ಅತಿಯಾದ ಕೊಬ್ಬಿನಂಶ ಅತಿಯಾದ ಉಪ್ಪು ಹಾಗೂ ನಾರಿನ ಅಂಶವಿಲ್ಲದ ಆಹಾರ ಸೇವನೆ
* ಮಧ್ಯಪಾನ / ಧೂಮಪಾನ
* ನೋವು ನಿವಾರಕ ಔಷಧಿಗಳ ದೀರ್ಘಾವಧಿ ಪ್ರಯೋಗ
* ಚಟುವಟಿಕೆ ಇಲ್ಲದ ಅನಿಮಿಯತ ಜೀವನ ಶೈಲಿ
* ಅನುವಂಶಿಕ
* ವಯಸ್ಸಿನ ಅಂಶ
* ಟೈಪ್ 2ಮಧುಮೇಹ,ಹೃದಯ ಸಂಬಂಧಿ ಹಾಗೂ ಮೂತ್ರಪಿಂಡ ಕಾಯಿಲೆಗಳು ನರ ಮತ್ತು ಮಾನಸ ರೋಗ ಕಾಯಿಲೆಗಳು

ಲಕ್ಷಣಗಳು :-
*ತಲೆನೋವು
* ಮಂದದ್ರಷ್ಟಿ
* ತಲೆ ತಿರುಗುವಿಕೆ
* ಉಸಿರಾಟ ತೊಂದರೆ
* ಎದೆ ಮತ್ತು ತಲೆಯ ಭಾಗದಲ್ಲಿ ಬಡಿತದ ಭಾವನೆ
* ಅತಿಯಾದ ಆಯಾಸ ಹಾಗೂ ವಾಕರಿಕೆ

ರಕ್ತದ ಒತ್ತಡ ಪತ್ತೆ ಹಚ್ಚದೆ ಹೋದಲ್ಲಿ ಹೃದಯಘಾತ ಪಾರ್ಶ್ವ ವಾಯು ಮತ್ತು ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.  ಆರೋಗ್ಯಕರ ಆಹಾರ ವ್ಯಾಯಾಮ ಮತ್ತು ಉತ್ತಮ ಒತ್ತಡ ನಿರ್ವಹಣೆಯ ಜೀವನ ಶೈಲಿ ಬದಲಾವಣೆಗಳು ಅಧಿಕ ರಕ್ತದ ಒತ್ತಡವನ್ನು ನಿಭಾಯಿಸಲು ಉತ್ತಮ ಮಾರ್ಗಗಳಾಗಿವೆ ಅಧಿಕ ರಕ್ತದೊತ್ತಡವನ್ನು ಸಂಪೂರ್ಣ ಗುಣಪಡಿಸಲು ಸಾಧ್ಯವಿಲ್ಲ ಔಷಧಿ ಮತ್ತು ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ ಕೆಲವು ಮಾರ್ಪಾಡುಗಳೊಂದಿಗೆ ನಿಯಂತ್ರಿಸಬಹುದು ಇದಕ್ಕೆ ಸಾಮಾನ್ಯವಾಗಿ ನಿಯಮಿತ ವೈದ್ಯಕೀಯ ಆರೈಕೆ ಅಗತ್ಯ.

ಆಯುರ್ವೇದ ಔಷಧಿ ಯಾದ ಸರ್ಪಗಂಧವು ರಕ್ತದೊತ್ತಡಕ್ಕೆ ಉತ್ತಮ ಚಿಕಿತ್ಸೆಯಾಗಿದೆ ಪಂಚಕರ್ಮ ಚಿಕಿತ್ಸೆ ಯಲ್ಲಿ ಒಂದಾದ ಶಿರೋದಾರವು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ ದಿನನಿತ್ಯವೂ ಯೋಗಾಸನ ವ್ಯಾಯಾಮ ಇವುಗಳಿಂದಲೂ ರಕ್ತದೊತ್ತಡವನ್ನು ನಿಯಂತ್ರಿಸಬಹುದು.

ಬರಹ :
ಡಾ. ಜ್ಯೋತಿ ಕೆ, ಆಯುರ್ವೇದ ವೈದ್ಯರು, ಮಂಗಳೂರು, 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 hour ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

1 hour ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago