Advertisement
ಅನುಕ್ರಮ

ನಾಶವಾದ ಕಾಡನ್ನು ಪುನರುಜ್ಜೀವನಗೊಳಿಸುವುದು ಸುಲಭವೇ ? ಕಾಡು ಜೀರ್ಣೋದ್ಧಾರ ಹೇಗೆ ?

Share

ಹೊರಬಿಟ್ಟ ದನಗಳನ್ನೆಲ್ಲ ಒಳಸೇರಿಸಿ ಉರಿಯುವ ಸೆಖೆಯಿಂದ ರಕ್ಷಣೆಗೋಸ್ಕರ ವಿದ್ಯುತ್ತು ಪಂಖದ ಅಡಿಯಲ್ಲಿ ಒಂದಷ್ಟು ಹೊತ್ತು ಕುಳಿತಿದ್ದೆ. ಆಗುಂತಕರಿಬ್ಬರು ಬಂದರು. ಮನೆಯೆದುರು ವಿಶಾಲವಾಗಿ ಚಾಚಿರುವ ಸಾಗುವಾನಿ ಮರವನ್ನು ನೋಡುತ್ತಾ ನೋಡುತ್ತಾ, ಈ ಮರವನ್ನು ಇನ್ನೂ ಬೆಳೆಸಿದರೆ ಒಟ್ಟೆ ಬಿದ್ದು ಹಾಳಾಗುತ್ತದೆ. ಯಾರಿಗಾದರೂ ಉಪಯೋಗವಾಗಬಹುದು. ಸುಮ್ಮನೆ ಹಾಳುಮಾಡಬೇಡಿ. ನೀವು ಕೊಡಲೇ ಬೇಕೆಂದೇನೂ ಇಲ್ಲ, ಆದರೂ ನೀವು ಕೊಡುವುದಿದ್ದರೆ ಅದಕ್ಕೆ ವ್ಯವಸ್ಥೆಯನ್ನು ನಾವು ಮಾಡಿಕೊಡುತ್ತೇವೆ ಅಂತ ಅಂದರು.

ಅವರ ಬುದ್ಧಿ ಮಾತಿಗೂ (ಮತ್ತೆಗೂ ) ತಲೆದೂಗುತ್ತಾ ದೇಶಾವರಿ ನಗುವೊಂದನ್ನು ನಕ್ಕೆ. ಈಗಿನ್ನೂ ನೂರಕ್ಕೂ ಮಿಕ್ಕಿ ವರುಷದ ಮರ, ನನ್ನ ಮೊಮ್ಮಗನ ಕಾಲಕ್ಕೆ ತನ್ನ ಮುತ್ತಜ್ಜನ ಬಳುವಳಿ ಇದು ಎಂದು ಘೋಷಿಸಿ ಕೊಳ್ಳುವಂತೆ ಹೇಗಾದರೂ ಸರಿ ಅದು ಇರಲಿ ಎಂದು ಅವರನ್ನು ಬೀಳ್ಕೊಟ್ಟೆ.

ನಾಶವಾದ ಕಾಡನ್ನು ಮತ್ತೆ ಪುನರುಜ್ಜೀವನಗೊಳಿಸುವುದು ಅದೆಷ್ಟು ಶ್ರಮ ಬೇಕೋ, ಅಂತೆಯೇ ಇರುವ ಕಾಡನ್ನು ಉಳಿಸಿಕೊಳ್ಳಲು ಅದಕ್ಕಿಂತ ಹೆಚ್ಚಿನ ಶ್ರಮದ ಅಗತ್ಯತೆ ಇದೆ ಎಂದು ನಾನು ಇತ್ತೀಚಿನ ಅನೇಕ ವರ್ಷಗಳಲ್ಲಿ ಕಂಡುಕೊಂಡೆ.

ನನ್ನಂತವರಿಗೆ ಮರವೊಂದಿದ್ದರೆ ಅದು ಬಿಡುಗಡೆ ಮಾಡುವ ಆಮ್ಲಜನಕ,ಇಂಗಿಸಿ ಕೊಡುವ ನೀರು, ಧರೆಗೆ ನೀಡುವ ತಂಪು, ಬೀಸು ಗಾಳಿಯಿಂದ ದೊರೆಯುವ ರಕ್ಷಣೆ ಮುಂತಾದುವು ಮೌಲ್ಯವೆಂದು ಕಂಡರೆ, ಮರ ಕಟುಕರಿಗೆ ಅದನ್ನು ಮಾರಿ ಸಿಗುವ ಹಣವೇ ಮೌಲ್ಯ. ಹಾಗಾಗಿ ಅವರು ನಾನಾ ಬುದ್ಧಿವಂತಿಕೆಯ ಮಾತಿನಿಂದ ನಮ್ಮನ್ನು ಓಲೈಸಲು ನೋಡುತ್ತಾರೆ. ಆಡಿನ ಮರಿಯನ್ನು ಎತ್ತಿ ನಡೆದು ಹೋಗುತ್ತಿದ್ದ ವೃದ್ಧನೊಬ್ಬನನ್ನು ಕಂಡು, ನಾಯಿಯನ್ನು ಎತ್ತಿಕೊಂಡು ಯಾಕೆ ಹೋಗುತ್ತಿರುವೆ ಎಂದು ಕೇಳುವ ಪಂಚತಂತ್ರ ಕಥೆಯ ವಂಚಕರ ನೆನಪಾಗುತ್ತದೆ. ಆ ಪ್ರಮಾಣದಲ್ಲಿ ನಮ್ಮನ್ನು ಮರುಳು ಮಾಡಿ ಬಿಡುತ್ತಾರೆ.

ಬೇಕಾಬಿಟ್ಟಿಯಾಗಿ ಎಳೆಯುವ ವಿದ್ಯುತ್ತು ಲೈನುಗಳು ಮರಗಳಿಗೆ ಅತ್ಯಂತ ದೊಡ್ಡ ಮಾರಕ. ಮುಖ್ಯರಸ್ತೆಯಿಂದ ಒಂದು ಕಿಲೋಮೀಟರ್ ಒಳಗಡೆ ನಮ್ಮ ಮನೆ. ಮಾರ್ಗದ ಒಂದು ಬದಿ ಖಾಲಿ ಬಿದ್ದಿತ್ತು. ಹಲಸಿನ ಗಿಡಗಳನ್ನು ನೆಟ್ಟು, ಬಿಡಾಡಿ ದನಗಳಿಂದ ರಕ್ಷಣೆಗೋಸ್ಕರ ಬೇಲಿ ಹಾಕಿ, ಗೊಬ್ಬರ ನೀರನ್ನು ಹಾಕಿ ದಷ್ಟಪುಷ್ಟವಾಗಿ ಸಾಕಿದ್ದೆ. ಕಾಯಿ ಬಿಡುವ ಹಂತದಲ್ಲಿತ್ತು. ಒಂದು ದಿನ ಕಾರ್ಯನಿಮಿತ್ತ ಪೇಟೆ ಎಡೆಗೆ ಹೊರಟಿದ್ದೆ. ದೂರದಲ್ಲಿ ರಸ್ತೆಯ ಅಂಚನ್ನು ನೋಡುತ್ತಿದ್ದಂತೆ *ಕದಳಿಯೊಳು ಮದದಾನೆ ಹೊಕ್ಕಂದದಲಿ* ಎಂಬ ಷಟ್ಪದಿ ಕಾವ್ಯ ನೆನೆಪಿಸುವಂತಾಯಿತು. ಜತನದಿಂದ ಕಾಪಾಡಿದ ಅಷ್ಟೂ ಹಲಸಿನ ಗಿಡಗಳನ್ನು ವಿದ್ಯುತ್ತು ಲೈನು ಎಳೆಯಲೋಸುಗ ನಿರ್ದಾಕ್ಷಿಣ್ಯವಾಗಿ ಕಡಿದು ಕೊಚ್ಚಿ ಹಾಕಿದ್ದರು. ಬದಲಿ ವ್ಯವಸ್ಥೆ ಇದೆಯೋ ಎಂದು ನೋಡುವಷ್ಟೂ ವ್ಯವಧಾನ ಅವರಲ್ಲಿ ಇರಲಿಲ್ಲ.ಮೌನದ ಕಣ್ಣೀರು ಮಾತ್ರ ನನ್ನ ಉತ್ತರವಾಗಿತ್ತು. ಉಳಕೊಂಡ ಎರಡು ಮರಗಳು ಈಗಲೂ ಹಣ್ಣುಗಳನ್ನು ನೀಡುತ್ತಿವೆ.

ಬೆಳೆದುನಿಂತ ಮರವೊಂದಿದ್ದರೆ ಅದರ ಪರಿಮಳ ಯಾವ ಯಾವುದೋ ಊರುಗಳಿಗೆ ಹೋಗುತ್ತದೆ. ಎಲ್ಲೆಲ್ಲಿಂದಲೋ ದೇವ, ದೈವಸ್ಥಾನಗಳಿಗೆ ಮರದ ಬೇಡಿಕೆಯನ್ನು ಸಲ್ಲಿಸಿಕೊಂಡು ಬರುವುದನ್ನು ನೋಡಿ ಆಶ್ಚರ್ಯಚಕಿತನಾಗುತ್ತೇನೆ.

ಇಲ್ಲೆಲ್ಲಾ ನನಗೆ ಕಂಡುದು ಸ್ಥಳೀಯವಾಗಿ ಉತ್ತಮ ಮರಗಳ ಕೊರತೆ. ಎಲ್ಲಾ ದೇವಸ್ಥಾನಗಳ ಆಡಳಿತ ಮಂಡಳಿಯಲ್ಲಿ ನನ್ನದೊಂದು ಕಿರು ಮನವಿ. ಪ್ರತಿಯೊಂದು ದೇವ ದೈವಸ್ಥಾನಗಳ ಸುತ್ತುಮುತ್ತು ಜಾಗವಿದ್ದರೆ ಅಲ್ಲೊಂದಷ್ಟು ಮರಗಳನ್ನು ಬೆಳೆಸಲು ಪ್ರಯತ್ನಿಸೋಣ. ಅಲ್ಲದಿದ್ದರೆ ಸ್ಥಳೀಯವಾಗಿ ಕೃಷಿ ಜಾಗ ಇದ್ದವರಲ್ಲಿ ಮುಂದಿನ ಜೀರ್ಣೋದ್ಧಾರಕ್ಕೆ ಒದಗಿ ಬರುವಂತೆ ಎರಡೆರಡು ಮರಗಳನ್ನು ಆದರೂ ನೆಟ್ಟು ಮೀಸಲಿಡುವಂತೆ ಮನವಿ ಮಾಡಿಕೊಳ್ಳೋಣ.

ನೂರು ವರ್ಷ ಬೆಳೆದು ಬಾಳಿದ ಮರವೊಂದು ಕಡಿದು ಮೋಪನ್ನಾಗಿಸಿದರೂ ಮತ್ತೆ ಮುಂದಿನ ನೂರು ವರ್ಷ ನಿರ್ಜೀವವಾಗಿ ಬಾಳಿಕೆ ಬರುತ್ತದೆ. ಸರಿಯಾಗಿ ಜೀರ್ಣವಾಗುವ ಮೊದಲೇ ಜೀರ್ಣೋದ್ಧಾರದ ಕಾರ್ಯಕ್ರಮ ಕೈಗೊಂಡರೆ ಅದು ಆತ್ಮಹತ್ಯೆಗೆ ಸಮ. ಮರಕ್ಕೆ ಮಾಡಿದ ಅಪಮಾನ.

ಮರವಿರೆ ಮಾನವ ಕಡಿದವ ದಾನವ,
ಉಳಿವಿನ ಕಾಳಗ ಘೋಷಿಸುವ,
ಮರವನ್ನುಳಿಸುವ ಮಾರ್ಗವನರಸುವ,
ನಾವು ಒಟ್ಟಾಗುವ ಧ್ವನಿ ಕರೆವ.
ಎಂಬ ಕವಿ ಕರೆಯೊಂದಿಗೆ ಪ್ರಕೃತಿಯೆಡೆಗೆ ಸಾಗೋಣ. 

# ಎ.ಪಿ. ಸದಾಶಿವ. ಮರಿಕೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

3 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

11 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

12 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

12 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

22 hours ago