Advertisement
MIRROR FOCUS

ವಿಷ ರಹಿತ ಅಡಿಕೆ ದಾಸ್ತಾನು | ಪುತ್ತೂರಿನಲ್ಲಿ ಮಾಹಿತಿ ಕಾರ್ಯಕ್ರಮ | ಕೃಷಿ ಉತ್ಪನ್ನಗಳ ದಾಸ್ತಾನಿಗೆ ವಿಷ ರಹಿತ ವ್ಯವಸ್ಥೆ ಅಗತ್ಯವಿದೆ

Share
ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ಕೊಯ್ಲು ನಂತರ ವೈಜ್ಞಾನಿಕ ದಾಸ್ತಾನು ಕೂಡಾ ಅತೀ ಮುಖ್ಯವಾದ ವಿಷಯ. ಅನೇಕ ಸಮಯಗಳಿಂದ ವಿವಿಧ ಪ್ರಯೋಗವನ್ನು ಕೆಲವು ಕೃಷಿಕರು ಮಾಡುತ್ತಿದ್ದಾರೆ. ಇದೀಗ ವಿನೂತನ ತಂತ್ರಜ್ಞಾನ ಬ್ಯಾಗ್‌ ಬಗ್ಗೆ ಮಾಹಿತಿ ಕಾರ್ಯಕ್ರಮ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಪುತ್ತೂರಿನ ಚುಂಚಶ್ರೀ ಸಭಾಭವನದಲ್ಲಿ ಶುಕ್ರವಾರ ನಡೆಯಿತು.ಮುಂದೆ ಓದಿ
ಸಭೆಯ ಅಧ್ಯಕ್ಷತೆಯನ್ನು  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ವಹಿಸಿದ್ದರು. ಸಭೆಯಲ್ಲಿ ವಿಟ್ಲದ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ, ಕೃಷಿಕ ಹಾಗೂ ಸಿಟಿ ಆಸ್ಪತ್ರೆಯ ವೈದ್ಯ ಡಾ. ಸೂರ್ಯನಾರಾಯಣ ಹಾಗೂ ಗ್ರೈನ್‌ ಪ್ರೋ ಸಂಸ್ಥೆಯ ದಕ್ಷಿಣ ಭಾರತ ಮತ್ತು ಶ್ರೀಲಂಕಾದ ವಿಭಾಗದ ಮಾರ್ಕೆಂಟಿಗ್‌ ಮುಖ್ಯಸ್ಥ ಗೋಪಿನಾಥ್‌ ವಡಿವೆಲ್‌ ಮಾಹಿತಿ ನೀಡಿದರು. ಮುಂದೆ ಓದಿ
ವಿಟ್ಲದ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಮಾತನಾಡಿ, ಅಡಿಕೆ ಹಾಗೂ ಕೃಷಿಉತ್ಪನ್ನಗಳನ್ನು  ನೈಟ್ರೋಜನ್‌ ಗ್ಯಾಸ್‌ ಬಳಕೆ ಮಾಡಿ ಕೊಠಡಿಗಳಲ್ಲಿ ದಾಸ್ತಾನು ಮಾಡುವ ಬಗ್ಗೆ ಪಿಂಗಾರ ಸಂಸ್ಥೆಯು ನಡೆಸುತ್ತಿರುವ ವಿಧಾನಗಳು ಹಾಗೂ ಅಧ್ಯಯನಗಳ ಬಗ್ಗೆ ಮಾಹಿತಿ ನೀಡಿದರು.  ಕೃಷಿಕ ಹಾಗೂ ಸಿಟಿ ಆಸ್ಪತ್ರೆಯ ವೈದ್ಯ ಡಾ. ಸೂರ್ಯನಾರಾಯಣ ಮಾತನಾಡಿ, ಅಡಿಕೆಯನ್ನು ಕರ್ಪೂರ ಬಳಸಿ ಡ್ರಮ್‌ಗಳಲ್ಲಿ ಶೇಖರಣೆ ಮಾಡುವ ವಿಧಾನ ಹಾಗೂ ಅದರಲ್ಲಿ ಯಶಸ್ಸಿನ ಬಗ್ಗೆ ಮಾಹಿತಿ ನೀಡಿದರು. ಗ್ರೈನ್‌ ಪ್ರೋ ಸಂಸ್ಥೆಯ ದಕ್ಷಿಣ ಭಾರತ ಮತ್ತು ಶ್ರೀಲಂಕಾದ ವಿಭಾಗದ ಮಾರ್ಕೆಂಟಿಗ್‌ ಮುಖ್ಯಸ್ಥ ಗೋಪಿನಾಥ್‌ ವಡಿವೆಲ್‌ ಮಾತನಾಡಿ, ವಿಶೇಷ ವಿನ್ಯಾಸದ ಬ್ಯಾಗ್‌ಗಳು ಹಾಗೂ ಕೊಕೂನ್‌ ಗಳ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ವಿದೇಶಗಳಲ್ಲಿ ಇಂತಹ ಬ್ಯಾಗ್‌ ಬಳಕೆ ಮಾಡುತ್ತಿದ್ದಾರೆ. ಭಾರತದಲ್ಲಿ ಕೂಡಾ ಈಚೆಗೆ ಈ ಮಾದರಿಯ ದಾಸ್ತಾನು ಬಗ್ಗೆ ಕೃಷಿಕರು ಆಸಕ್ತರಾಗಿದ್ದಾರೆ ಎಂದರು.ಮುಂದೆ ಓದಿ
ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಮಾತನಾಡಿ, ಅಡಿಕೆ ಬೆಳೆಗಾರರಿಗೆ ದಾಸ್ತಾನು ಹಾಗೂ ಅಡಿಕೆ ಗುಣಮಟ್ಟ ಕಾಪಾಡುವುದು ಈಗ ಬಹುದೊಡ್ಡ ಸವಾಲಿನ ಕೆಲಸವಾಗಿದೆ. ಹೊಸ ಮಾದರಿಯ ಪ್ರಯತ್ನಗಳು ಅಡಿಕೆ ದಾಸ್ತಾನಿನ ಬಗ್ಗೆ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು. ಮುಂದೆ ಓದಿ
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ  ಸ್ವಾಗತಿಸಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

11 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

11 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

12 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

12 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

12 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

12 hours ago